Homeಮುಖಪುಟಶಾಶ್ವತವಾಗಿ ಕಾಡಲಿರುವ ಮತ್ತೊಂದು ವಿಭಜನೆಯ ಚಿತ್ರ

ಶಾಶ್ವತವಾಗಿ ಕಾಡಲಿರುವ ಮತ್ತೊಂದು ವಿಭಜನೆಯ ಚಿತ್ರ

- Advertisement -
- Advertisement -

ಕೊರೊನ ನಿಯಂತ್ರಣ ಮಾಡಲು ಸರಕಾರ ಕೈಗೊಳ್ಳುತ್ತಿರುವ ಮುನ್ನೆಚ್ಚರಿಕೆಯ ಕ್ರಮವಾಗಿ ನಿನ್ನೆ ಉತ್ತರ ಪ್ರದೇಶದಲ್ಲಿ ವಿಧೇಯರಾಗಿ ಮೈಮೇಲೆ ರಾಸಾಯನಿಕ ಸಿಂಪಡಿಸಿಕೊಳ್ಳುತ್ತಿದ್ದ ಆ ಮಂದಿ ಇದ್ದಾರಲ್ಲ, ಅವರಲ್ಲಿ ಒಬ್ಬರಾಗಿ ನಮ್ಮನ್ನು ಊಹಿಸಿಕೊಳ್ಳೋಣ. ಅವರಲ್ಲಿ ಒಬ್ಬರಾಗಿ ನಮ್ಮ ಗಂಡ, ಹೆಂಡತಿ, ಮಗ, ಮಗಳು, ಅಣ್ಣ ತಮ್ಮ, ತಂಗಿ, ಅಕ್ಕ, ಇನ್ನಿತರ ಸಮೀಪದ ಕುಟುಂಬಸ್ಥರು, ಸ್ನೇಹಿತರು ಮುಂತಾದವರ ಪೈಕಿ ಯಾರನ್ನಾದರೂ ಊಹಿಸಿಕೊಳ್ಳೋಣ. ನಮಗೆ ಏನನಿಸುತಿತ್ತು? ಇನ್ನೊಮ್ಮೆ ನಮ್ಮನ್ನು ನಾವೇ ಕೇಳಿಕೊಳ್ಳೋಣ, ಏನನಿಸುತಿತ್ತು? ಅದೇ ಅನಿಸಿಕೆ ನಮಗೆ ‘ನಮ್ಮವರು’ ಅಂತ ನಾವು ಭಾವಿಸದ, ನಮ್ಮ ಹಾಗಿರುವ ಬಟ್ಟೆ ತೊಟ್ಟುಕೊಳ್ಳದ, ನಮ್ಮ ಹಾಗೆ ಅಧಿಕಾರಸ್ಥರ ಜತೆ ಮಾತನಾಡಲಾಗದ ಆ ಜನ ಅಕ್ಷರಶ ಪ್ರಾಣಿಗಳಂತೆ ಸರಕಾರದ ಮಂದಿಯ ಕೈಯ್ಯಲ್ಲಿ ಶಾರೀರಿಕ ಹಿಂಸೆಯನ್ನೂ, ಮಾನಸಿಕ ಅವಮಾನವನ್ನೂ ಅನುಭವಿಸುವಾಗ ಬಂತೇ? ಘಟನೆಯ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ ಅಲ್ಲಿನ ಜಿಲ್ಲಾಧಿಕಾರಿ ಹೇಳಿದ್ದಿಷ್ಟು: ‘ಆ ಜನರನ್ನು ಹೊತ್ತು ತಂದಿದ್ದ ವಾಹನದ ಮೇಲೆ ರಾಸಾಯನಿಕ ಸಿಂಪಡಿಸಿ ಅಂತ ನಿರ್ದೇಶನವಿತ್ತು. ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಕೆಳ ಹಂತದಲ್ಲಿ ಕೆಲಸಮಾಡುವ ಸಿಬ್ಬಂದಿ ಅತ್ಯುತ್ಸಾಹ (over enthusiasm) ತೋರಿದ ಕಾರಣ ಈ ಘಟನೆ ನಡೆದಿದೆ. ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ’.

ಹೌದು. ಅಚಾತುರ್ಯಗಳು ನಡೆಯುತ್ತವೆ. ಇದು ಸಂಕಷ್ಟದ ಕಾಲ. ಕೈಮೀರುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸುವುದು ಸರಕಾರಕ್ಕಾದರೂ ಕಷ್ಟವೇ. ಈಗ ಸಿಕ್ಕ ಸಿಕ್ಕಲ್ಲೆಲ್ಲಾ ಹುಳುಕು ಹುಡುಕುವುದು ಸರಿಯಲ್ಲ. ಈ ಘಟನೆ ಕೂಡಾ ಅಚಾತುರ್ಯದಿಂದಲೇ ನಡೆಯಿತು ಎನ್ನುವುದನ್ನು ಒಪ್ಪಿಕೊಳ್ಳೋಣ. ಆದರೆ ಕೆಲ ಪ್ರಶ್ನೆಗಳನ್ನು ಕೇಳದೆ ಹೋದರೆ ಚರಿತ್ರೆ ನಮ್ಮನ್ನು ಕ್ಷಮಿಸಲಾರದು.

ಮೊದಲನೆಯದಾಗಿ, ಕೆಳಹಂತದಲ್ಲಿ ಕೆಲಸ ಮಾಡುವ ಅಲ್ಲಿನ ಸರಕಾರೀ ಸಿಬ್ಬಂದಿಗೆ ತಮ್ಮಂತೆ ಇರುವ ಮನುಷ್ಯರನ್ನು ಹೀಗೆ ನಡೆಸಿಕೊಳ್ಳಬಹುದೆಂದು ಅನ್ನಿಸುತ್ತದೆ ಎನ್ನುವುದಿದೆಯಲ್ಲ, ಅದು ಕೊರೊನಕ್ಕಿಂತಲೂ ಅಪಾಯಕಾರಿಯಾದದ್ದಲ್ಲವೇ? ಅವರ ಮನಸ್ಸು ಎಂತಹದ್ದು? ಅವರ ಸಂವೇದನೆ ಎಂತಹದ್ದು? ಅವರ ಯೋಚನೆಯ ಮಟ್ಟ ಎಂತಹದ್ದು? ಕೊರೊನ ಹೇಗೋ ಇನ್ನೊಂದಷ್ಟು ಸಮಯದಲ್ಲಿ ನಾಶವಾಗುತ್ತದೆ ಅಥವಾ ರೂಪಾಂತರ ಹೊಂದುತ್ತದೆ. ಆದರೆ ಇಂತಹದ್ದೊಂದು ಅಮಾನುಷ ವ್ಯವಸ್ಥೆ ಇದು ನಮಗೆ ಶಾಶ್ವತ ಎನ್ನುವ ಸತ್ಯ ನಮ್ಮನ್ನು ಕಾಡದೆ ಹೋದರೆ ಹೇಗೆ?


ಇದನ್ನು ಓದಿ: ಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ


ಇನ್ನೊಂದು ವಿಚಾರ. ಈ ಘಟನೆಗೆ ಅಲ್ಲಿನ ಅಧಿಕಾರಸ್ಥರು ಪ್ರತಿಕ್ರಿಯಿಸಿದ ರೀತಿ ನೋಡಿ. ಅಲ್ಲಿನ ಜಿಲ್ಲಾಧಿಕಾರಿ ನೀಡಿದ ಮೇಲಿನ ಪ್ರತಿಕ್ರಿಯೆ ಗಮನಿಸಿ. ಅದು ಯಾಂತ್ರಿಕ, ತಾಂತ್ರಿಕ ಪ್ರತಿಕ್ರಿಯೆ. ಅದರಲ್ಲಿ, ಒಂದಷ್ಟು ಮಾನವೀಯ ಸಂವೇದನೆಯ ಸೆಲೆ ಕಾಣಿಸುತ್ತದೆಯೇ? ವಾಸ್ತವದಲ್ಲಿ, ಆತನ ಪ್ರತಿಕ್ರಿಯೆ ಆತ ಆ ಕಷ್ಟಜೀವಿಗಳ ಕ್ಷಮೆ ಕೇಳುವುದರೊಂದಿಗೆ ಪ್ರಾರಂಭವಾಗಬೇಕಿತ್ತು. ಬಿಡಿ, ಆತ ಎಷ್ಟಾದರೂ ಅಧಿಕಾರಶಾಹಿಯ ಭಾಗ. ಅಲ್ಲಿನ ಮುಖ್ಯಮಂತ್ರಿ, ಸಂಬಂಧಪಟ್ಟ ಇಲಾಖೆಯ ಮಂತ್ರಿ, ಅಲ್ಲಿನ ಶಾಸಕ, ಆ ಪ್ರದೇಶದ ಸಂಸದ ಯಾರ ಬಾಯಿಯಿಂದಾದರೂ ಒಂದು ಸಣ್ಣ ಪಶ್ಚಾತಾಪದ, ಮರುಕದ ಪ್ರತ್ರಿಕ್ರಿಯೆ ಬರಲಿಲ್ಲ.

ಇನ್ನೂ ಒಂದು ಗಮನಿಸಬೇಕಾದ ವಿಚಾರ ಅಂತ ಅಂದರೆ ಅಲ್ಲಿನ (ಬರೇಲಿ ಕ್ಷೇತ್ರ) ಸಂಸದ ಸಂತೋಷ್ ಗಂಗ್ವಾರ್ ಕೇಂದ್ರ ಸಚಿವ ಸಂಪುಟದಲ್ಲಿ ಕಾರ್ಮಿಕ ಖಾತೆಯ ಸಚಿವ. ಹಿಂಸೆ ಅನುಭವಿಸಿದ್ದು ಕಾರ್ಮಿಕರು ಎಂಬ ಕಾರಣಕ್ಕೋಸ್ಕರವಾದರೂ ಆ ವ್ಯಕ್ತಿಯ ಬಾಯಿಂದ ಒಂದು ಸಾಂತ್ವನದ ಮಾತು ಬರಬೇಕಿತ್ತಲ್ಲಾ. ಇಲ್ಲ, ಈ ತನಕ ಬಂದಿಲ್ಲ. ಅಂದರೆ ಈ ಘಟನೆ ನಮಗೆ ಎತ್ತಿ ತೋರಿಸಿದ್ದು ಎಲ್ಲಾ ಕಡೆ, ಎಲ್ಲಾ ಸಮಯದಲ್ಲೂ, ಎಲ್ಲಾ ಸ್ತರದ ಮಂದಿಯಿಂದಲೂ ಸಂಭವಿಸಬಹುದಾದ ಒಂದು ಅಚಾತುರ್ಯವನ್ನು ಮಾತ್ರವಲ್ಲ. ಅದು ಎತ್ತಿ ತೋರಿಸಿದ್ದು ಈ ದೇಶದಲ್ಲಿ ಉಳ್ಳವರಿಗೆ, ಪ್ರಬಲರಿಗೆ, ಅಧಿಕಾರಸ್ಥರಿಗೆ ಸಾಮಾನ್ಯ ಜನರ ಬಗ್ಗೆ ಇರುವ ಉಪೇಕ್ಷೆಯನ್ನು. ಇಂತಹದ್ದೊಂದು ಘಟನೆ ಯಾರದ್ದಾದರೂ ಅಚಾತುರ್ಯದಿಂದಲೇ ಆದರೂ ಈ ದೇಶದ ಯಾವುದಾದರೂ ಒಂದು ವಿಮಾನ ನಿಲ್ದಾಣದಲ್ಲಿ ನಡೆದಿದ್ದರೆ ಏನಾಗುತ್ತಿತ್ತು. ಇಷ್ಟೊತ್ತಿಗೆ ಅಲ್ಲಿನ ಮುಖ್ಯಮಂತ್ರಿ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿತ್ತೇ? ಅಂದ ಹಾಗೆ ಈ ಕರೋನ ಎಂಬ ದುರಂತವನ್ನು ಹೊತ್ತು ತಂದದ್ದು ವಿಮಾನಗಳಲ್ಲಿ ಬಂದಿಳಿದವರು. ಈಗ ಅದರ ನಿರ್ನಾಮಕ್ಕಾಗಿ ರಾಸಾಯನಿಕದಲ್ಲಿ ಮುಳುಗೇಳುತ್ತಿರುವುದು ರಸ್ತೆಗಳಲ್ಲಿ ನಡೆದುಕೊಂಡು ಹೋಗಲೂ ಅವಕಾಶವಿಲ್ಲದ ಬಡವರು.

ಬರೇಲಿ ಕ್ಷೇತ್ರದ ಸಂಸದ ಸಂತೋಷ್ ಗಂಗ್ವಾರ್

ಕರೋನ ಲಾಕೌಟ್ ಜಾರಿಗೆ ಬಂದ ಕ್ಷಣದಿಂದ ನರಕ ಸದೃಶ ಬದುಕನ್ನು ಅನುಭವಿಸುತ್ತಿರುವವರು ಈ ದೇಶದ ವಲಸೆ ಕಾರ್ಮಿಕರು. ಅವರೇ ಈ ದೇಶವನ್ನು ನಿಜ ಅರ್ಥದಲ್ಲಿ ಕಟ್ಟುತ್ತಿರುವವರು. ಭಾರತದ ಬೆಳವಣಿಗೆಯ ಸಾಕಾರ ಸ್ವರೂಪವಾಗಿ ನಗರಗಳಲ್ಲಿ ಏಳುತ್ತಿರುವ ಬಹುಅಂತಸ್ತಿನ ಕಟ್ಟಡಗಳನ್ನು, ಅಗಲಗಲದ ಹೆದ್ದಾರಿಗಳನ್ನೂ, ಎತ್ತರೆತ್ತರದ ಮೇಲ್ಸೇತುವೆಗಳನ್ನು ಕೊರೆವ ಚಳಿಯಲ್ಲಿ, ಸುಡುವ ಬಿಸಿಲಲ್ಲಿ ನಿಂತು ಹಗಲಿರುಳು ಕಟ್ಟುತ್ತಿರುವುದು ಈ ಶ್ರಮಿಕ ವರ್ಗ. ನಗರಗಳಲ್ಲೇ ನಮ್ಮ ನಡುವೆ ನೆಲೆಸಿದ್ದರೂ ನಮ್ಮ ಕಣ್ಣುಗಳು ಅವರೆಡೆಗೆ ಎಷ್ಟು ಕುರುಡಾಗಿದೆ ಎಂದು ನಮಗೆ ಅರ್ಥ ಮಾಡಿಸಿದ್ದು ಕೊರೊನಾ ಎನ್ನುವ ಅದೃಶ್ಯ ಸೂಕ್ಷ್ಮ ಜೀವಿ. ಈ ಮಂದಿ ಸಾಲು ಸಾಲಾಗಿ ಬೀದಿಗಿಳಿದು ನಮ್ಮನ್ನು ನಮ್ಮ ನಮ್ಮ ಊರುಗಳಿಗೆ ಮರಳಿ ಹೋಗಲು ಬಿಡಿ ಎಂದು ಗೋಗರೆಯತೊಡಗಿದಾಗ ಇಷ್ಟೊಂದು ಸಂಖ್ಯೆಯಲ್ಲಿ ನಮ್ಮ ಥಳುಕಿನ ಬದುಕಿನ ನಡುವೆ ಇವರೆಲ್ಲಾ ಇದ್ದಾರೆ ಎನ್ನುವ ಸತ್ಯ ನಮಗೆ ಗೋಚರವಾದದ್ದು. ಲಕ್ಷ ಲಕ್ಷ ಸಂಖ್ಯೆಯಲ್ಲಿ ತಮ್ಮ ಇದ್ದ ಬದ್ದ ಸರಕುಗಳನ್ನೆಲ್ಲಾ ತಲೆಯಲ್ಲಿ, ಹೆಗಲಲ್ಲಿ ಹೊತ್ತುಕೊಂಡು, ಹಸಿದು ಅಳುವ ಕಂದಮ್ಮಗಳನ್ನು ಕಂಕುಳಲ್ಲಿ ತಗಲಿಸಿಕೊಂಡು ಸಾಲು ಸಾಲಾಗಿ ನಗರಗಳ ಬೀದಿಗಳಲ್ಲಿ ಇವರು ನಡೆದೇ ಸಾಗುತಿದ್ದ ದೃಶ್ಯ ಈ ದೇಶದ ಆತ್ಮಸಾಕ್ಷಿಯನ್ನು ಬಹುಕಾಲ ಕಾಡಲಿದೆ. ಆತ್ಮಸಾಕ್ಷಿ ಎನ್ನುವುದು ಇನ್ನೂ ಎಲ್ಲಾದರೂ ಉಳಿದಿದ್ದರೆ.


ಇದನ್ನು ಓದಿ: ಲಾಕ್‌ಡೌನ್‌ ಘೋಷಿದಂದಿನಿಂದ 22 ವಲಸೆ ಕಾರ್ಮಿಕರ ಸಾವು


ಕಾಣಿಸಿದಾಗಲೆಲ್ಲಾ ನಮ್ಮ ಆತ್ಮಸಾಕ್ಷಿಯನ್ನು ಇದುವರೆಗೆ ಕಲುಕುತಿದ್ದ ಚಿತ್ರ ಬೇರೊಂದಿತ್ತು. ಮಾಧ್ಯಮಗಳಲ್ಲಿ, ಪ್ರದರ್ಶನಾಲಯಗಳಲ್ಲಿ, ಪುಸ್ತಕಗಳಲ್ಲಿ, ಡಾಕ್ಯುಮೆಂಟರಿಗಳಲ್ಲಿ ನಾವು ನೋಡಿರಬಹುದಾದ ಆ ದೃಶ್ಯ 1947ರ ದೇಶ ವಿಭಜನೆಗೆ ಸಂಬಂದಿಸಿದ್ದು. ಅಂದಿನ ಜನ ಧರ್ಮದ್ವೇಷ ಎಂಬ ಇನ್ನೊಂದು ವೈರಸ್ಸಿನ ದಾಳಿಗೆ ತುತ್ತಾಗಿ ಭಾರತದಿಂದ ಪಾಕಿಸ್ತಾನದತ್ತ, ಪಾಕಿಸ್ತಾನದಿಂದ ಭಾರತದತ್ತ ಸಾಲುಸಾಲಾಗಿ ಸಾಗುತಿದ್ದ ಆ ಕಪ್ಪುಬಿಳುಪು ಚಿತ್ರ ಮನುಷ್ಯತ್ವ ಎನ್ನುವುದು ಲವಲೇಶವಾದರೂ ಉಳಿಸಿಕೊಂಡಿರುವ ಮನುಷ್ಯರನ್ನು ಬಹಳ ಹೊತ್ತು ಕಾಡುತ್ತದೆ.

ಅದನ್ನು ಊಹಿಸಿಕೊಂಡರೂ ಮನಸ್ಸಿನಲ್ಲಿ ತಳಮಳ ಉಂಟಾಗುತ್ತದೆ. ಅದು ಚಿತ್ರ. ಬಹಳ ಹಳೆಯ ಚಿತ್ರ. ಕಳೆದ ಒಂದು ವಾರದಿಂದ ನಾವು ಕಂಡದ್ದು ಈ ಚಿತ್ರವನ್ನೂ ಮೀರಿಸುವ ದುರಂತಮಯ ಜೀವಂತ ಚಿತ್ರಣವನ್ನು. ಇದಕ್ಕೆ ಸಂಬಂಧಿಸಿದ ಚಿತ್ರಗಳು, ವಿಡಿಯೋಗಳು ದೇಶ ವಿಭಜನೆಯ ಹಳೆಯ ದುರಂತಕ್ಕಿಂತಲೂ ಮಿಗಿಲಾದ ದುರಂತ ಒಂದನ್ನು ನಮ್ಮ ಮನದಲ್ಲಿ ಆಗಾಗ ಕುಣಿಸಲಿದೆ. ಇದೂ ಒಂದು ವಿಭಜನೆಯ ಕತೆಯೇ ಅಲ್ಲವೇ? ಅಂದಿನದ್ದು ಈ ದೇಶದ ಭೂಗೋಳ-ರಾಜಕೀಯ ವಿಭಜನೆಯ ಚಿತ್ರಣವಾದರೆ, ಇದು ಈ ದೇಶದ ಆರ್ಥಿಕ ಸಾಮಾಜಿಕ ವಿಭಜನೆಯ ಕತೆ.

ಲಾಕ್‌ಡೌನ್ ಅನಿವಾರ್ಯವಾಗಿರಬಹುದು. ಆದರೆ, ರಸ್ತೆಗಳಲ್ಲಿ ಯಾರೂ ಇಲ್ಲದ ಅಂದರೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲೇ ಬದುಕುವ ದೇಶಗಳೂ ಕೂಡಾ ಒಂದೆರಡು ದಿವಸಗಳ ಅವಧಿ ನೀಡಿ ಲಾಕ್‌ಡೌನ್ ಘೋಷಿಸಿರುವಾಗ ಹೆಚ್ಚು ಕಡಿಮೆ ರಸ್ತೆಯಲ್ಲೇ ಬದುಕುವ ಇಷ್ಟೊಂದು ಮಂದಿ ನಮ್ಮ ನಡುವೆ ಇದ್ದಾರೆ ಎಂಬ ಸಣ್ಣ ಅರಿವಾದರು ಇದ್ದಿದ್ದರೆ ಇನ್ನೈದು ಘಂಟೆಗಳಲ್ಲಿ ಯಾರೂ ರಸ್ತೆಗಳಲ್ಲಿ ಕಾಣಿಸಿಕೊಳ್ಳಬಾರದು ಎನ್ನುವ ಆದೇಶ ಬರಲು ಸಾಧ್ಯವಿತ್ತೇ. ಏನು ಕೊರೊನ, ಏನು ಸಾಮಾಜಿಕ ಅಂತರ, ಏನು ಇಷ್ಟೆಲ್ಲಾ ಅವಾಂತರ ಎನ್ನುವ ಎನ್ನುವ ಯಾವ ಅರಿವು ಕೂಡಾ ಇಲ್ಲದೆ ದಿಗಿಲಿನಿಂದ, ಹಸಿವಿನಿಂದ, ಅವಮಾನದಿಂದ ಈ ಮಂದಿ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಸೇರಿ ತಮ್ಮ ತಮ್ಮ ಊರುಗಳತ್ತ ನಡೆಯಲು ಪ್ರಾರಂಭಿಸಿದಾಗಲೇ ಏನೋ ಎಡವಟ್ಟಾಗಿದೆ ಅಂತ ನಮಗೆ ತಿಳಿದದ್ದು. ನಮಗೆ ಎಂದರೆ ನಮಗೆ. ಕೇವಲ ಆಳುವವರಿಗೆ ಮಾತ್ರವಲ್ಲ. ಆಳುವವರನ್ನು ಪೂಜಿಸುವ, ಟೀಕಿಸುವ ಎಲ್ಲರಿಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...