Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...