Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...