Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...