Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...