Homeಮುಖಪುಟಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌ನಲ್ಲಿ ಪತ್ರಕರ್ತರಿಗೆ ವಿನಾಯಿತಿ ಇಲ್ಲದಿರುವುದು ದೇಶದಲ್ಲಿ ಪತ್ರಿಕೋದ್ಯಮವನ್ನು ಸ್ಥಗಿತಗೊಳಿಸುತ್ತದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಕೇಂದ್ರಕ್ಕೆ ಕಳುಹಿಸಿದ ಪತ್ರವನ್ನು ಭಾನುವಾರ ಗಿಲ್ಡ್ ಸಾರ್ವಜನಿಕಗೊಳಿಸಿದ್ದು, ಆಗಸ್ಟ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾಯಿದೆಯು ನಾಗರಿಕರ ದತ್ತಾಂಶಗಳ ಸಂಗ್ರಹಣೆ ಮತ್ತು ಪ್ರಕ್ರಿಯೆಗೆ ಸಂಬಂಧಿಸಿ ಖಾಸಗಿ ಮತ್ತು ಸರ್ಕಾರಿ ಘಟಕಗಳ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ವ್ಯಕ್ತಿಗಳ ಡಿಜಿಟಲ್ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ರಕ್ಷಿಸಲು ವಿಫಲವಾದ ಘಟಕಗಳ ಮೇಲೆ 250 ಕೋಟಿ ರೂಪಾಯಿಗಳವರೆಗೆ ದಂಡವನ್ನು ಇದು ಪ್ರಸ್ತಾಪಿಸುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಈ ಕಾಯಿದೆಯಲ್ಲಿ ಪತ್ರಕರ್ತರಿಗೆ ವಿನಾಯಿತಿ ನೀಡದ ಕಾರಣ ಮತ್ತು ಪತ್ರಿಕೋದ್ಯಮ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ನಿಬಂಧನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ನಿರ್ದಿಷ್ಟವಾಗಿ, ತಮ್ಮ ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವೈಯಕ್ತಿಕ ಡೇಟಾವನ್ನು ಉಪಯೋಗಿಸುವುದು ಡಿಪಿಡಿಪಿಎ [ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್, 2023] ಸೆಕ್ಷನ್ 7ರ ಅಡಿಯಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿಕೊಂಡಿದೆ. ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವಿನಾಯಿತಿ ಇಲ್ಲದಿರುವುದು ಪತ್ರಕರ್ತರು ತಮ್ಮ ಕೆಲಸದ ಸಂದರ್ಭದಲ್ಲಿ ಯಾವುದೇ ವೈಯಕ್ತಿಕ ಡೇಟಾವನ್ನು ಬಹಿರಂಗಗೊಳಿಸಲು ಒಪ್ಪಿಗೆಯ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಒಪ್ಪಿಗೆಯ ನಿರಾಕರಣೆಯು ಪತ್ರಿಕಾ ಮಾಧ್ಯಮದ ಮೂಲಭೂತ ಪಾತ್ರ ಹಾಗು ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸುವ ಅದರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಗಿಲ್ಡ್ ಹೇಳಿಕೊಂಡಿದೆ.

ತನಿಖಾ ಪತ್ರಿಕೋದ್ಯಮ, ಸಾಮಾನ್ಯ ಸುದ್ದಿ ವರದಿ, ಅಭಿಪ್ರಾಯ ಮತ್ತು ವಿಶ್ಲೇಷಣೆ, ಖಾಸಗಿ ಸಂಶೋಧನೆ  ತನಿಖಾ ಅಧ್ಯಯನ ಡೇಟಾ ಮೇಲೆ ಹೆಚ್ಚಾಗಿ ಅವಲಂಬಿತವಾಗಿವೆ. ಇದನ್ನು ಕಾನೂನುಬದ್ಧ ಬಳಕೆಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ಪತ್ರಕರ್ತರಿಗೆ ಕಾನೂನಿನಲ್ಲಿ ವಿನಾಯಿತಿ ನೀಡಬೇಕು. ಈ ವಿನಾಯಿತಿಯು ನಿರ್ದಿಷ್ಟವಾಗಿ ಸಮರ್ಥನೆಯಾಗಿದೆ, ಇಲ್ಲವಾದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪತ್ರಕರ್ತರ ಕರ್ತವ್ಯದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...