Homeಅಂತರಾಷ್ಟ್ರೀಯಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

- Advertisement -
- Advertisement -

ಭಾರತದ ನೆರೆಯ ದೇಶವಾದ ಶ್ರೀಲಂಕಾದಲ್ಲಿ ಸದ್ದಿಲ್ಲದಂತೆ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜನರು ಪಲಾಯನ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಸಾಮೂಹಿಕ ವಲಸೆಯ ಸಂಕೇತವಾಗಿ, ಜಾಫ್ನಾ ಮತ್ತು ಮನ್ನಾರ್ ಪ್ರದೇಶಗಳಿಂದ ಹೊರಟ 16 ಶ್ರೀಲಂಕನ್‌‌ ಪ್ರಜೆಗಳ ಎರಡು ತಂಡಗಳು ಭಾರತದ ತಮಿಳುನಾಡಿನ ತೀರವನ್ನು ತಲುಪಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

3 ಮಕ್ಕಳು ಸೇರಿದಂತೆ 6 ನಿರಾಶ್ರಿತರ ಮೊದಲ ತಂಡ ರಾಮೇಶ್ವರಂ ಕರಾವಳಿಯ ಬಳಿ ಸಿಕ್ಕಿಬಿದ್ದ ನಂತರ ಹತ್ತು ಜನರಿರುವ ಎರಡನೆ ತಂಡ ತಡರಾತ್ರಿ ತಮಿಳುನಾಡು ತಲುಪಿದೆ. ಎರಡು ತಂಡ ಕೂಡಾ ಶ್ರೀಲಂಕನ್ ತಮಿಳು ಜನಾಂಗದವರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದ್ದಾರೆ. ತಂಡವನ್ನು ಕೋಸ್ಟ್ ಗಾರ್ಡ್ ರಕ್ಷಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ, ನಿರುದ್ಯೋಗ, ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ಉತ್ತರದಲ್ಲಿ ತಮಿಳು ಪ್ರಾಬಲ್ಯದ ಪ್ರದೇಶಗಳಿಂದ ಹೆಚ್ಚಿನ ನಿರಾಶ್ರಿತರ ವಲಸೆ ಆರಂಭವಾಗಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 2000 ನಿರಾಶ್ರಿತರು ತಮಿಳುನಾಡಿನ ತೀರವನ್ನು ತಲುಪುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲು ಬಂದ ಆರು ಮಂದಿ ವಲಸಿಗರು, ತಾವು ಹಲವು ವಾರಗಳಿಂದ ಆಹಾರಕ್ಕಾಗಿ ಪರದಾಡುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಜಲಪ್ರದೇಶವಾದ ಅರಿಚಲ್ ಮುನೈ ದ್ವೀಪದಲ್ಲಿ ಅವರನ್ನು ಇಳಿಸಲು ತಾವು ಮೀನುಗಾರರಿಗೆ ಸುಮಾರು 50,000 ರೂಪಾಯಿಗಳನ್ನು ಪಾವತಿಸಿದ್ದಾಗಿ ಅವರು ಹೇಳಿದ್ದಾರೆ.

ನಿರಾಶ್ರಿತರ ಮಾತುಗಳನ್ನು ಆಲಿಸಿದ ಅಧಿಕಾರಿಯೊಬ್ಬರ ಮಾತಿನ ಪ್ರಕಾರ, ಇನ್ನೂ ಹಲವು ಕುಟುಂಬಗಳು ಭಾರತಕ್ಕೆ ಪಲಾಯನ ಮಾಡುವ ದಾರಿಯನ್ನು ಹುಡುಕುತ್ತಿವೆ. ಭಾರತೀಯ ಜಲಪ್ರದೇಶದಿಂದ ಅವರನ್ನು ರಕ್ಷಿಸಿದ ಅಧಿಕಾರಿಗಳು ಅವರಿಗೆ ಆಹಾರ ನೀಡಿ ರಾಮೇಶ್ವರಂ ಬಳಿಯ ಮಂಟಪಂ ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ತಮಿಳನಾಡು ತಲುಪಿದ ಎರಡನೇ ಗುಂಪು ಫೈಬರ್ ಬೋಟ್‌ನಲ್ಲಿ ಬಂದಿದ್ದು, ತಮ್ಮ ಪ್ರಯಾಣಕ್ಕಾಗಿ 3 ಲಕ್ಷ ರೂ. ಪಾವತಿದ್ದಾಗಿ ಹೇಳಿದ್ದಾರೆ. ಪ್ರಯಾಣದ ಮಧ್ಯೆ ದೋಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಸುಮಾರು ಒಂದು ದಿನವನ್ನು ಸಮುದ್ರದ ಮಧ್ಯದಲ್ಲಿ ಕಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರು ರಾತ್ರಿ 9 ರ ಸುಮಾರಿಗೆ ರಾಮೇಶ್ವರಂನ ಪಂಬನ್ ಸೇತುವೆಯನ್ನು ತಲುಪಿದ್ದಾರೆ.

ತನಗೆ ತಿಳಿದಿರುವ ಅನೇಕರು ಶ್ರೀಲಂಕಾವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಸ್. ಶಿವಕರನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ದೇಶದಲ್ಲಿ ಭಯ ಮತ್ತು ಆತಂಕವಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿವೆ. ಉದಾಹರಣೆಗೆ ಇನ್ನೊಂದು ವಾರದಲ್ಲಿ ಅಕ್ಕಿ 500/ಕೆಜಿಗೆ ತಲುಪುತ್ತದೆ” ಎಂದು ಅವರು ತರ್ಕಿಸಿದ್ದಾರೆ. “ಅಲ್ಲಿ ಇಂದು ಕೆಜಿಗೆ 290 ರೂ.ಗೆ ಮಾರಾಟವಾಗುತ್ತಿದೆ ಮತ್ತು ಸಕ್ಕರೆಗೆ ಅದೇ ಬೆಲೆ ಇದೆ. 400 ಗ್ರಾಂ ಹಾಲಿನ ಪುಡಿ 790 ರೂ. ಇದೆ” ಎಂದು ಅವರು ಹೇಳಿದ್ದಾರೆ.

ಪೇಪರ್ ಕೊರತೆಯಿಂದಾಗಿ ಶ್ರೀಲಂಕಾ ಸರ್ಕಾರ ಶಾಲಾ ಪರೀಕ್ಷೆಗಳನ್ನು ಇತ್ತೀಚೆಗೆ ಮುಂದೂಡಿದೆ. ಈಳಂ ಪೀಪಲ್ಸ್ ರೆವಲ್ಯೂಷನರಿ ಲಿಬರೇಶನ್ ಫ್ರಂಟ್ (ಇಪಿಆರ್‌ಎಲ್‌ಎಫ್) ಸುರೇಶ್ ಪ್ರೇಮಚಂದ್ರನ್ ಪ್ರಕಾರ, “ಕಾರ್ಮಿಕ ವರ್ಗವು ತೀವ್ರ ಸಂಕಷ್ಟ ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...