Homeಅಂತರಾಷ್ಟ್ರೀಯಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

- Advertisement -
- Advertisement -

ಭಾರತದ ನೆರೆಯ ದೇಶವಾದ ಶ್ರೀಲಂಕಾದಲ್ಲಿ ಸದ್ದಿಲ್ಲದಂತೆ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜನರು ಪಲಾಯನ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಸಾಮೂಹಿಕ ವಲಸೆಯ ಸಂಕೇತವಾಗಿ, ಜಾಫ್ನಾ ಮತ್ತು ಮನ್ನಾರ್ ಪ್ರದೇಶಗಳಿಂದ ಹೊರಟ 16 ಶ್ರೀಲಂಕನ್‌‌ ಪ್ರಜೆಗಳ ಎರಡು ತಂಡಗಳು ಭಾರತದ ತಮಿಳುನಾಡಿನ ತೀರವನ್ನು ತಲುಪಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

3 ಮಕ್ಕಳು ಸೇರಿದಂತೆ 6 ನಿರಾಶ್ರಿತರ ಮೊದಲ ತಂಡ ರಾಮೇಶ್ವರಂ ಕರಾವಳಿಯ ಬಳಿ ಸಿಕ್ಕಿಬಿದ್ದ ನಂತರ ಹತ್ತು ಜನರಿರುವ ಎರಡನೆ ತಂಡ ತಡರಾತ್ರಿ ತಮಿಳುನಾಡು ತಲುಪಿದೆ. ಎರಡು ತಂಡ ಕೂಡಾ ಶ್ರೀಲಂಕನ್ ತಮಿಳು ಜನಾಂಗದವರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದ್ದಾರೆ. ತಂಡವನ್ನು ಕೋಸ್ಟ್ ಗಾರ್ಡ್ ರಕ್ಷಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ, ನಿರುದ್ಯೋಗ, ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ಉತ್ತರದಲ್ಲಿ ತಮಿಳು ಪ್ರಾಬಲ್ಯದ ಪ್ರದೇಶಗಳಿಂದ ಹೆಚ್ಚಿನ ನಿರಾಶ್ರಿತರ ವಲಸೆ ಆರಂಭವಾಗಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 2000 ನಿರಾಶ್ರಿತರು ತಮಿಳುನಾಡಿನ ತೀರವನ್ನು ತಲುಪುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲು ಬಂದ ಆರು ಮಂದಿ ವಲಸಿಗರು, ತಾವು ಹಲವು ವಾರಗಳಿಂದ ಆಹಾರಕ್ಕಾಗಿ ಪರದಾಡುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಜಲಪ್ರದೇಶವಾದ ಅರಿಚಲ್ ಮುನೈ ದ್ವೀಪದಲ್ಲಿ ಅವರನ್ನು ಇಳಿಸಲು ತಾವು ಮೀನುಗಾರರಿಗೆ ಸುಮಾರು 50,000 ರೂಪಾಯಿಗಳನ್ನು ಪಾವತಿಸಿದ್ದಾಗಿ ಅವರು ಹೇಳಿದ್ದಾರೆ.

ನಿರಾಶ್ರಿತರ ಮಾತುಗಳನ್ನು ಆಲಿಸಿದ ಅಧಿಕಾರಿಯೊಬ್ಬರ ಮಾತಿನ ಪ್ರಕಾರ, ಇನ್ನೂ ಹಲವು ಕುಟುಂಬಗಳು ಭಾರತಕ್ಕೆ ಪಲಾಯನ ಮಾಡುವ ದಾರಿಯನ್ನು ಹುಡುಕುತ್ತಿವೆ. ಭಾರತೀಯ ಜಲಪ್ರದೇಶದಿಂದ ಅವರನ್ನು ರಕ್ಷಿಸಿದ ಅಧಿಕಾರಿಗಳು ಅವರಿಗೆ ಆಹಾರ ನೀಡಿ ರಾಮೇಶ್ವರಂ ಬಳಿಯ ಮಂಟಪಂ ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ತಮಿಳನಾಡು ತಲುಪಿದ ಎರಡನೇ ಗುಂಪು ಫೈಬರ್ ಬೋಟ್‌ನಲ್ಲಿ ಬಂದಿದ್ದು, ತಮ್ಮ ಪ್ರಯಾಣಕ್ಕಾಗಿ 3 ಲಕ್ಷ ರೂ. ಪಾವತಿದ್ದಾಗಿ ಹೇಳಿದ್ದಾರೆ. ಪ್ರಯಾಣದ ಮಧ್ಯೆ ದೋಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಸುಮಾರು ಒಂದು ದಿನವನ್ನು ಸಮುದ್ರದ ಮಧ್ಯದಲ್ಲಿ ಕಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರು ರಾತ್ರಿ 9 ರ ಸುಮಾರಿಗೆ ರಾಮೇಶ್ವರಂನ ಪಂಬನ್ ಸೇತುವೆಯನ್ನು ತಲುಪಿದ್ದಾರೆ.

ತನಗೆ ತಿಳಿದಿರುವ ಅನೇಕರು ಶ್ರೀಲಂಕಾವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಸ್. ಶಿವಕರನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ದೇಶದಲ್ಲಿ ಭಯ ಮತ್ತು ಆತಂಕವಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿವೆ. ಉದಾಹರಣೆಗೆ ಇನ್ನೊಂದು ವಾರದಲ್ಲಿ ಅಕ್ಕಿ 500/ಕೆಜಿಗೆ ತಲುಪುತ್ತದೆ” ಎಂದು ಅವರು ತರ್ಕಿಸಿದ್ದಾರೆ. “ಅಲ್ಲಿ ಇಂದು ಕೆಜಿಗೆ 290 ರೂ.ಗೆ ಮಾರಾಟವಾಗುತ್ತಿದೆ ಮತ್ತು ಸಕ್ಕರೆಗೆ ಅದೇ ಬೆಲೆ ಇದೆ. 400 ಗ್ರಾಂ ಹಾಲಿನ ಪುಡಿ 790 ರೂ. ಇದೆ” ಎಂದು ಅವರು ಹೇಳಿದ್ದಾರೆ.

ಪೇಪರ್ ಕೊರತೆಯಿಂದಾಗಿ ಶ್ರೀಲಂಕಾ ಸರ್ಕಾರ ಶಾಲಾ ಪರೀಕ್ಷೆಗಳನ್ನು ಇತ್ತೀಚೆಗೆ ಮುಂದೂಡಿದೆ. ಈಳಂ ಪೀಪಲ್ಸ್ ರೆವಲ್ಯೂಷನರಿ ಲಿಬರೇಶನ್ ಫ್ರಂಟ್ (ಇಪಿಆರ್‌ಎಲ್‌ಎಫ್) ಸುರೇಶ್ ಪ್ರೇಮಚಂದ್ರನ್ ಪ್ರಕಾರ, “ಕಾರ್ಮಿಕ ವರ್ಗವು ತೀವ್ರ ಸಂಕಷ್ಟ ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...