Homeಅಂತರಾಷ್ಟ್ರೀಯಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

- Advertisement -
- Advertisement -

ಭಾರತದ ನೆರೆಯ ದೇಶವಾದ ಶ್ರೀಲಂಕಾದಲ್ಲಿ ಸದ್ದಿಲ್ಲದಂತೆ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜನರು ಪಲಾಯನ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಸಾಮೂಹಿಕ ವಲಸೆಯ ಸಂಕೇತವಾಗಿ, ಜಾಫ್ನಾ ಮತ್ತು ಮನ್ನಾರ್ ಪ್ರದೇಶಗಳಿಂದ ಹೊರಟ 16 ಶ್ರೀಲಂಕನ್‌‌ ಪ್ರಜೆಗಳ ಎರಡು ತಂಡಗಳು ಭಾರತದ ತಮಿಳುನಾಡಿನ ತೀರವನ್ನು ತಲುಪಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

3 ಮಕ್ಕಳು ಸೇರಿದಂತೆ 6 ನಿರಾಶ್ರಿತರ ಮೊದಲ ತಂಡ ರಾಮೇಶ್ವರಂ ಕರಾವಳಿಯ ಬಳಿ ಸಿಕ್ಕಿಬಿದ್ದ ನಂತರ ಹತ್ತು ಜನರಿರುವ ಎರಡನೆ ತಂಡ ತಡರಾತ್ರಿ ತಮಿಳುನಾಡು ತಲುಪಿದೆ. ಎರಡು ತಂಡ ಕೂಡಾ ಶ್ರೀಲಂಕನ್ ತಮಿಳು ಜನಾಂಗದವರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದ್ದಾರೆ. ತಂಡವನ್ನು ಕೋಸ್ಟ್ ಗಾರ್ಡ್ ರಕ್ಷಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ, ನಿರುದ್ಯೋಗ, ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ಉತ್ತರದಲ್ಲಿ ತಮಿಳು ಪ್ರಾಬಲ್ಯದ ಪ್ರದೇಶಗಳಿಂದ ಹೆಚ್ಚಿನ ನಿರಾಶ್ರಿತರ ವಲಸೆ ಆರಂಭವಾಗಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 2000 ನಿರಾಶ್ರಿತರು ತಮಿಳುನಾಡಿನ ತೀರವನ್ನು ತಲುಪುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲು ಬಂದ ಆರು ಮಂದಿ ವಲಸಿಗರು, ತಾವು ಹಲವು ವಾರಗಳಿಂದ ಆಹಾರಕ್ಕಾಗಿ ಪರದಾಡುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಜಲಪ್ರದೇಶವಾದ ಅರಿಚಲ್ ಮುನೈ ದ್ವೀಪದಲ್ಲಿ ಅವರನ್ನು ಇಳಿಸಲು ತಾವು ಮೀನುಗಾರರಿಗೆ ಸುಮಾರು 50,000 ರೂಪಾಯಿಗಳನ್ನು ಪಾವತಿಸಿದ್ದಾಗಿ ಅವರು ಹೇಳಿದ್ದಾರೆ.

ನಿರಾಶ್ರಿತರ ಮಾತುಗಳನ್ನು ಆಲಿಸಿದ ಅಧಿಕಾರಿಯೊಬ್ಬರ ಮಾತಿನ ಪ್ರಕಾರ, ಇನ್ನೂ ಹಲವು ಕುಟುಂಬಗಳು ಭಾರತಕ್ಕೆ ಪಲಾಯನ ಮಾಡುವ ದಾರಿಯನ್ನು ಹುಡುಕುತ್ತಿವೆ. ಭಾರತೀಯ ಜಲಪ್ರದೇಶದಿಂದ ಅವರನ್ನು ರಕ್ಷಿಸಿದ ಅಧಿಕಾರಿಗಳು ಅವರಿಗೆ ಆಹಾರ ನೀಡಿ ರಾಮೇಶ್ವರಂ ಬಳಿಯ ಮಂಟಪಂ ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ತಮಿಳನಾಡು ತಲುಪಿದ ಎರಡನೇ ಗುಂಪು ಫೈಬರ್ ಬೋಟ್‌ನಲ್ಲಿ ಬಂದಿದ್ದು, ತಮ್ಮ ಪ್ರಯಾಣಕ್ಕಾಗಿ 3 ಲಕ್ಷ ರೂ. ಪಾವತಿದ್ದಾಗಿ ಹೇಳಿದ್ದಾರೆ. ಪ್ರಯಾಣದ ಮಧ್ಯೆ ದೋಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಸುಮಾರು ಒಂದು ದಿನವನ್ನು ಸಮುದ್ರದ ಮಧ್ಯದಲ್ಲಿ ಕಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರು ರಾತ್ರಿ 9 ರ ಸುಮಾರಿಗೆ ರಾಮೇಶ್ವರಂನ ಪಂಬನ್ ಸೇತುವೆಯನ್ನು ತಲುಪಿದ್ದಾರೆ.

ತನಗೆ ತಿಳಿದಿರುವ ಅನೇಕರು ಶ್ರೀಲಂಕಾವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಸ್. ಶಿವಕರನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ದೇಶದಲ್ಲಿ ಭಯ ಮತ್ತು ಆತಂಕವಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿವೆ. ಉದಾಹರಣೆಗೆ ಇನ್ನೊಂದು ವಾರದಲ್ಲಿ ಅಕ್ಕಿ 500/ಕೆಜಿಗೆ ತಲುಪುತ್ತದೆ” ಎಂದು ಅವರು ತರ್ಕಿಸಿದ್ದಾರೆ. “ಅಲ್ಲಿ ಇಂದು ಕೆಜಿಗೆ 290 ರೂ.ಗೆ ಮಾರಾಟವಾಗುತ್ತಿದೆ ಮತ್ತು ಸಕ್ಕರೆಗೆ ಅದೇ ಬೆಲೆ ಇದೆ. 400 ಗ್ರಾಂ ಹಾಲಿನ ಪುಡಿ 790 ರೂ. ಇದೆ” ಎಂದು ಅವರು ಹೇಳಿದ್ದಾರೆ.

ಪೇಪರ್ ಕೊರತೆಯಿಂದಾಗಿ ಶ್ರೀಲಂಕಾ ಸರ್ಕಾರ ಶಾಲಾ ಪರೀಕ್ಷೆಗಳನ್ನು ಇತ್ತೀಚೆಗೆ ಮುಂದೂಡಿದೆ. ಈಳಂ ಪೀಪಲ್ಸ್ ರೆವಲ್ಯೂಷನರಿ ಲಿಬರೇಶನ್ ಫ್ರಂಟ್ (ಇಪಿಆರ್‌ಎಲ್‌ಎಫ್) ಸುರೇಶ್ ಪ್ರೇಮಚಂದ್ರನ್ ಪ್ರಕಾರ, “ಕಾರ್ಮಿಕ ವರ್ಗವು ತೀವ್ರ ಸಂಕಷ್ಟ ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...