Homeಅಂತರಾಷ್ಟ್ರೀಯಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

- Advertisement -
- Advertisement -

ಭಾರತದ ನೆರೆಯ ದೇಶವಾದ ಶ್ರೀಲಂಕಾದಲ್ಲಿ ಸದ್ದಿಲ್ಲದಂತೆ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜನರು ಪಲಾಯನ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಸಾಮೂಹಿಕ ವಲಸೆಯ ಸಂಕೇತವಾಗಿ, ಜಾಫ್ನಾ ಮತ್ತು ಮನ್ನಾರ್ ಪ್ರದೇಶಗಳಿಂದ ಹೊರಟ 16 ಶ್ರೀಲಂಕನ್‌‌ ಪ್ರಜೆಗಳ ಎರಡು ತಂಡಗಳು ಭಾರತದ ತಮಿಳುನಾಡಿನ ತೀರವನ್ನು ತಲುಪಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

3 ಮಕ್ಕಳು ಸೇರಿದಂತೆ 6 ನಿರಾಶ್ರಿತರ ಮೊದಲ ತಂಡ ರಾಮೇಶ್ವರಂ ಕರಾವಳಿಯ ಬಳಿ ಸಿಕ್ಕಿಬಿದ್ದ ನಂತರ ಹತ್ತು ಜನರಿರುವ ಎರಡನೆ ತಂಡ ತಡರಾತ್ರಿ ತಮಿಳುನಾಡು ತಲುಪಿದೆ. ಎರಡು ತಂಡ ಕೂಡಾ ಶ್ರೀಲಂಕನ್ ತಮಿಳು ಜನಾಂಗದವರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದ್ದಾರೆ. ತಂಡವನ್ನು ಕೋಸ್ಟ್ ಗಾರ್ಡ್ ರಕ್ಷಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ, ನಿರುದ್ಯೋಗ, ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ಉತ್ತರದಲ್ಲಿ ತಮಿಳು ಪ್ರಾಬಲ್ಯದ ಪ್ರದೇಶಗಳಿಂದ ಹೆಚ್ಚಿನ ನಿರಾಶ್ರಿತರ ವಲಸೆ ಆರಂಭವಾಗಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 2000 ನಿರಾಶ್ರಿತರು ತಮಿಳುನಾಡಿನ ತೀರವನ್ನು ತಲುಪುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲು ಬಂದ ಆರು ಮಂದಿ ವಲಸಿಗರು, ತಾವು ಹಲವು ವಾರಗಳಿಂದ ಆಹಾರಕ್ಕಾಗಿ ಪರದಾಡುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಜಲಪ್ರದೇಶವಾದ ಅರಿಚಲ್ ಮುನೈ ದ್ವೀಪದಲ್ಲಿ ಅವರನ್ನು ಇಳಿಸಲು ತಾವು ಮೀನುಗಾರರಿಗೆ ಸುಮಾರು 50,000 ರೂಪಾಯಿಗಳನ್ನು ಪಾವತಿಸಿದ್ದಾಗಿ ಅವರು ಹೇಳಿದ್ದಾರೆ.

ನಿರಾಶ್ರಿತರ ಮಾತುಗಳನ್ನು ಆಲಿಸಿದ ಅಧಿಕಾರಿಯೊಬ್ಬರ ಮಾತಿನ ಪ್ರಕಾರ, ಇನ್ನೂ ಹಲವು ಕುಟುಂಬಗಳು ಭಾರತಕ್ಕೆ ಪಲಾಯನ ಮಾಡುವ ದಾರಿಯನ್ನು ಹುಡುಕುತ್ತಿವೆ. ಭಾರತೀಯ ಜಲಪ್ರದೇಶದಿಂದ ಅವರನ್ನು ರಕ್ಷಿಸಿದ ಅಧಿಕಾರಿಗಳು ಅವರಿಗೆ ಆಹಾರ ನೀಡಿ ರಾಮೇಶ್ವರಂ ಬಳಿಯ ಮಂಟಪಂ ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ತಮಿಳನಾಡು ತಲುಪಿದ ಎರಡನೇ ಗುಂಪು ಫೈಬರ್ ಬೋಟ್‌ನಲ್ಲಿ ಬಂದಿದ್ದು, ತಮ್ಮ ಪ್ರಯಾಣಕ್ಕಾಗಿ 3 ಲಕ್ಷ ರೂ. ಪಾವತಿದ್ದಾಗಿ ಹೇಳಿದ್ದಾರೆ. ಪ್ರಯಾಣದ ಮಧ್ಯೆ ದೋಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಸುಮಾರು ಒಂದು ದಿನವನ್ನು ಸಮುದ್ರದ ಮಧ್ಯದಲ್ಲಿ ಕಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರು ರಾತ್ರಿ 9 ರ ಸುಮಾರಿಗೆ ರಾಮೇಶ್ವರಂನ ಪಂಬನ್ ಸೇತುವೆಯನ್ನು ತಲುಪಿದ್ದಾರೆ.

ತನಗೆ ತಿಳಿದಿರುವ ಅನೇಕರು ಶ್ರೀಲಂಕಾವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಸ್. ಶಿವಕರನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ದೇಶದಲ್ಲಿ ಭಯ ಮತ್ತು ಆತಂಕವಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿವೆ. ಉದಾಹರಣೆಗೆ ಇನ್ನೊಂದು ವಾರದಲ್ಲಿ ಅಕ್ಕಿ 500/ಕೆಜಿಗೆ ತಲುಪುತ್ತದೆ” ಎಂದು ಅವರು ತರ್ಕಿಸಿದ್ದಾರೆ. “ಅಲ್ಲಿ ಇಂದು ಕೆಜಿಗೆ 290 ರೂ.ಗೆ ಮಾರಾಟವಾಗುತ್ತಿದೆ ಮತ್ತು ಸಕ್ಕರೆಗೆ ಅದೇ ಬೆಲೆ ಇದೆ. 400 ಗ್ರಾಂ ಹಾಲಿನ ಪುಡಿ 790 ರೂ. ಇದೆ” ಎಂದು ಅವರು ಹೇಳಿದ್ದಾರೆ.

ಪೇಪರ್ ಕೊರತೆಯಿಂದಾಗಿ ಶ್ರೀಲಂಕಾ ಸರ್ಕಾರ ಶಾಲಾ ಪರೀಕ್ಷೆಗಳನ್ನು ಇತ್ತೀಚೆಗೆ ಮುಂದೂಡಿದೆ. ಈಳಂ ಪೀಪಲ್ಸ್ ರೆವಲ್ಯೂಷನರಿ ಲಿಬರೇಶನ್ ಫ್ರಂಟ್ (ಇಪಿಆರ್‌ಎಲ್‌ಎಫ್) ಸುರೇಶ್ ಪ್ರೇಮಚಂದ್ರನ್ ಪ್ರಕಾರ, “ಕಾರ್ಮಿಕ ವರ್ಗವು ತೀವ್ರ ಸಂಕಷ್ಟ ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...