Homeಎಕಾನಮಿಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ ಎಂದು ಕೇರಳ ಹೇಳಿದೆ. “ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

“ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರದ ಉದ್ದೇಶಗಳನ್ನು ನಾವು ಈಗ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇವೆ. ಕೇಂದ್ರದ ‘ಲಾಕ್, ಸ್ಟಾಕ್ ಮತ್ತು ಬ್ಯಾರೆಲ್’ ನೀತಿಯನ್ನು ತಿರಸ್ಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಆತ್ಮನಿರ್ಭರ್ ಅನ್ನು ಯಾವುದೇ ರಾಜ್ಯವು ಒಪ್ಪಿಕೊಂಡಿಲ್ಲ. ಸಾಕು, ರಾಜ್ಯಗಳು ತನ್ನ ಹಕ್ಕುಗಳಿಗಾಗಿ ಇನ್ನು ರಾಜಿಯಾಗಬಾರದು. ಜಿಎಸ್‌ಟಿ ಪರಿಹಾರ ನಮ್ಮ ಸಾಂವಿಧಾನಿಕ ಹಕ್ಕು” ಐಸಾಕ್ ಟ್ವೀಟ್ ಮಾಡಿದ್ದಾರೆ.

41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದು ದೇವರ ಕಾರ್ಯ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ಅಸಹಾಯಕತೆ ಪ್ರದರ್ಶಿಸಿದ್ದರು.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಇನ್ನು ರಾಜ್ಯಗಳು ದೊಡ್ಡ ಮೊತ್ತದ ಸಾಲ ಪಡೆಯಲು ಮತ್ತು ಅದರ ಬಡ್ಡಿ ಕಟ್ಟಲು ಸಾಧ್ಯವಿಲ್ಲ ಎಂದು ಘೋಷಿಸಿವೆ. ಹಾಗಾಗಿ ಆರ್‌ಬಿಐ ಮತ್ತೆ ನೇರವಾಗಿ ಕೇಂದ್ರಕ್ಕೆ ಸಾಲ ಕೊಡುವ ನೀರಿಕ್ಷೆಯಿದೆ ಎನ್ನಲಾಗುತ್ತಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು, “ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ” ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರೂ “ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ” ಎಂದು ಸರ್ಕಾರ ವಾದಿಸಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...