Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...