Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...