Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...