Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...