Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...