Homeಕರೋನಾ ತಲ್ಲಣತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ - ಸೋಂಕಿತರ ಆರೋಪ

ತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ – ಸೋಂಕಿತರ ಆರೋಪ

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರಿದ್ದು, ಒಂದೇ ಶೌಚಾಲಯ, ಒಂದೇ ಒಂದು ಸ್ನಾನ ಗೃಹವಿದೆ. ಅವುಗಳು ಕೂಡ ಸ್ವಚ್ಛವಾಗಿಲ್ಲ.

- Advertisement -
- Advertisement -

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಕೋವಿಡ್‌ಕೇರ್ ಸೆಂಟರ್‌ನಲ್ಲಿ ಸೋಂಕಿತರು ಯಾವುದೇ ಮೂಲಸೌಕರ್ಯ  ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಒಂದು ವಾರ ಕಳೆದರು ಕೇಂದ್ರವನ್ನು ಸ್ವಚ್ಛಗೊಳಿಸುವುದಿಲ್ಲ ಸ್ವಾನಿಟೈಜ್ ಮಾಡುತ್ತಿಲ್ಲ ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರು ಇದ್ದಾರೆ. ಇಷ್ಟು ಜನರಿಗೆ ಒಂದೇ ಶೌಚಾಲಯ ಇದೆ. ಒಂದೇ ಒಂದು ಸ್ನಾನ ಗೃಹ ಇದೆ. ಇವುಗಳು ಕೂಡ ಸ್ವಚ್ಛವಾಗಿಲ್ಲ. ನಮ್ಮನ್ನು ಇಲ್ಲಿಗೆ ತಂದಿಟ್ಟಿದ್ದು ಯಾರೂ ಇತ್ತ ತಿರುಗಿಯೂ ನೋಡುತ್ತಿಲ್ಲ ಎಂದು ದೂರಿದ್ದಾರೆ.

ಶೌಚಾಲಯ ಒಂದೇ ಇದ್ದು ತುಂಬಾ ಸಮಸ್ಯೆಯಾಗುತ್ತಿದೆ. 40 ಜನರು ಒಂದೇ ಕಡೆ ಶೌಚಕ್ಕೆ ಹೋಗುವುದೆಂದರೆ ಎಂತಹ ಸಂಕಟದ ಸನ್ನಿವೇಶ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಮುಂಜಾನೆಯೇ ಎದ್ದು ಸರದಿ ಸಾಲಿನಲ್ಲಿ ನಿಲ್ಲಬೇಕು. ಅದನ್ನು ತಡೆದುಹಿಡಿಯುವುದು ಕಷ್ಟದ, ನೋವಿನ ಕೆಲಸ. ಉಸ್ತುವಾರಿ ವಹಿಸಿರುವವರು ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ತುಮಕೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ #NaanuGauri #COVID19

Posted by Naanu Gauri on Friday, August 14, 2020

ಕೇಂದ್ರದ ಉಸ್ತುವಾರಿ ವಹಿಸಿರುವವರಿಗೆ ಸಮಸ್ಯೆಗಳನ್ನು ಹೇಳಿದರೆ ಕೇಳುವುದಿಲ್ಲ. ಎಲ್ಲದಕ್ಕೂ ಪೊಲೀಸರಿಗೆ ಹೇಳುತ್ತೇವೆ ಎಂದು ಭಯ ಹುಟ್ಟಿಸುತ್ತಾರೆ. ನಾವು ಬಂದು ಏಳು ದಿನವಾಯ್ತು. ಐಸೋಲೇನ್ ಅವಧಿ ಏಳು ದಿನ ನಿಗದಿ ಮಾಡಿತ್ತು. ಆದರೂ ನಮ್ಮನ್ನು ಬಿಡುಗಡೆಗೊಳಿಸುತ್ತಿಲ್ಲ. ಈಗ ಹತ್ತು ದಿನ ಇರಬೇಕು ಎಂದು ಹೇಳುತ್ತಿದ್ದಾರೆ. ಯಾವುದೇ ಸೌಲಭ್ಯಗಳು ಇಲ್ಲ. ಇಂತಹ ಕೇಂದ್ರದಲ್ಲಿ ಇರುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲೂ ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆಯೆಂಬ ಬಗ್ಗೆ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಅದೂ ಕೂಡ ವೈರಲ್ ಆಗಿತ್ತು. ಈಗ ಕೋವಿಡ್ ಕೇರ್ ಕೇಂದ್ರದಲ್ಲೂ ಅದೇ ಪರಿಸ್ಥಿತಿ ಇದ್ದು ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂಸಿದಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಕಟ ರಾಷ್ಟ್ರ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಜೇಂದ್ರ ಕುಮಾರ್ ಗೌಡ ಹೇಳಿಕೆ ನೀಡಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಮಾಡದೆ ಇದ್ದ ಮೇಲೆ ಕೊರೊನ ಸೋಂಕಿತರನ್ನು ಸೇರಿಸಿ ಹಿಂಸೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಸೂಕ್ತ ಕ್ರಮ ಕೈಗೊಂಡು ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಮನೆಯಲ್ಲೇ ಚಿಕಿತ್ಸೆ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...