Homeಕರೋನಾ ತಲ್ಲಣತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ - ಸೋಂಕಿತರ ಆರೋಪ

ತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ – ಸೋಂಕಿತರ ಆರೋಪ

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರಿದ್ದು, ಒಂದೇ ಶೌಚಾಲಯ, ಒಂದೇ ಒಂದು ಸ್ನಾನ ಗೃಹವಿದೆ. ಅವುಗಳು ಕೂಡ ಸ್ವಚ್ಛವಾಗಿಲ್ಲ.

- Advertisement -
- Advertisement -

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಕೋವಿಡ್‌ಕೇರ್ ಸೆಂಟರ್‌ನಲ್ಲಿ ಸೋಂಕಿತರು ಯಾವುದೇ ಮೂಲಸೌಕರ್ಯ  ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಒಂದು ವಾರ ಕಳೆದರು ಕೇಂದ್ರವನ್ನು ಸ್ವಚ್ಛಗೊಳಿಸುವುದಿಲ್ಲ ಸ್ವಾನಿಟೈಜ್ ಮಾಡುತ್ತಿಲ್ಲ ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರು ಇದ್ದಾರೆ. ಇಷ್ಟು ಜನರಿಗೆ ಒಂದೇ ಶೌಚಾಲಯ ಇದೆ. ಒಂದೇ ಒಂದು ಸ್ನಾನ ಗೃಹ ಇದೆ. ಇವುಗಳು ಕೂಡ ಸ್ವಚ್ಛವಾಗಿಲ್ಲ. ನಮ್ಮನ್ನು ಇಲ್ಲಿಗೆ ತಂದಿಟ್ಟಿದ್ದು ಯಾರೂ ಇತ್ತ ತಿರುಗಿಯೂ ನೋಡುತ್ತಿಲ್ಲ ಎಂದು ದೂರಿದ್ದಾರೆ.

ಶೌಚಾಲಯ ಒಂದೇ ಇದ್ದು ತುಂಬಾ ಸಮಸ್ಯೆಯಾಗುತ್ತಿದೆ. 40 ಜನರು ಒಂದೇ ಕಡೆ ಶೌಚಕ್ಕೆ ಹೋಗುವುದೆಂದರೆ ಎಂತಹ ಸಂಕಟದ ಸನ್ನಿವೇಶ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಮುಂಜಾನೆಯೇ ಎದ್ದು ಸರದಿ ಸಾಲಿನಲ್ಲಿ ನಿಲ್ಲಬೇಕು. ಅದನ್ನು ತಡೆದುಹಿಡಿಯುವುದು ಕಷ್ಟದ, ನೋವಿನ ಕೆಲಸ. ಉಸ್ತುವಾರಿ ವಹಿಸಿರುವವರು ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ತುಮಕೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ #NaanuGauri #COVID19

Posted by Naanu Gauri on Friday, August 14, 2020

ಕೇಂದ್ರದ ಉಸ್ತುವಾರಿ ವಹಿಸಿರುವವರಿಗೆ ಸಮಸ್ಯೆಗಳನ್ನು ಹೇಳಿದರೆ ಕೇಳುವುದಿಲ್ಲ. ಎಲ್ಲದಕ್ಕೂ ಪೊಲೀಸರಿಗೆ ಹೇಳುತ್ತೇವೆ ಎಂದು ಭಯ ಹುಟ್ಟಿಸುತ್ತಾರೆ. ನಾವು ಬಂದು ಏಳು ದಿನವಾಯ್ತು. ಐಸೋಲೇನ್ ಅವಧಿ ಏಳು ದಿನ ನಿಗದಿ ಮಾಡಿತ್ತು. ಆದರೂ ನಮ್ಮನ್ನು ಬಿಡುಗಡೆಗೊಳಿಸುತ್ತಿಲ್ಲ. ಈಗ ಹತ್ತು ದಿನ ಇರಬೇಕು ಎಂದು ಹೇಳುತ್ತಿದ್ದಾರೆ. ಯಾವುದೇ ಸೌಲಭ್ಯಗಳು ಇಲ್ಲ. ಇಂತಹ ಕೇಂದ್ರದಲ್ಲಿ ಇರುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲೂ ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆಯೆಂಬ ಬಗ್ಗೆ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಅದೂ ಕೂಡ ವೈರಲ್ ಆಗಿತ್ತು. ಈಗ ಕೋವಿಡ್ ಕೇರ್ ಕೇಂದ್ರದಲ್ಲೂ ಅದೇ ಪರಿಸ್ಥಿತಿ ಇದ್ದು ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂಸಿದಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಕಟ ರಾಷ್ಟ್ರ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಜೇಂದ್ರ ಕುಮಾರ್ ಗೌಡ ಹೇಳಿಕೆ ನೀಡಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಮಾಡದೆ ಇದ್ದ ಮೇಲೆ ಕೊರೊನ ಸೋಂಕಿತರನ್ನು ಸೇರಿಸಿ ಹಿಂಸೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಸೂಕ್ತ ಕ್ರಮ ಕೈಗೊಂಡು ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಮನೆಯಲ್ಲೇ ಚಿಕಿತ್ಸೆ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...