Homeಕರೋನಾ ತಲ್ಲಣತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ - ಸೋಂಕಿತರ ಆರೋಪ

ತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ – ಸೋಂಕಿತರ ಆರೋಪ

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರಿದ್ದು, ಒಂದೇ ಶೌಚಾಲಯ, ಒಂದೇ ಒಂದು ಸ್ನಾನ ಗೃಹವಿದೆ. ಅವುಗಳು ಕೂಡ ಸ್ವಚ್ಛವಾಗಿಲ್ಲ.

- Advertisement -
- Advertisement -

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಕೋವಿಡ್‌ಕೇರ್ ಸೆಂಟರ್‌ನಲ್ಲಿ ಸೋಂಕಿತರು ಯಾವುದೇ ಮೂಲಸೌಕರ್ಯ  ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಒಂದು ವಾರ ಕಳೆದರು ಕೇಂದ್ರವನ್ನು ಸ್ವಚ್ಛಗೊಳಿಸುವುದಿಲ್ಲ ಸ್ವಾನಿಟೈಜ್ ಮಾಡುತ್ತಿಲ್ಲ ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರು ಇದ್ದಾರೆ. ಇಷ್ಟು ಜನರಿಗೆ ಒಂದೇ ಶೌಚಾಲಯ ಇದೆ. ಒಂದೇ ಒಂದು ಸ್ನಾನ ಗೃಹ ಇದೆ. ಇವುಗಳು ಕೂಡ ಸ್ವಚ್ಛವಾಗಿಲ್ಲ. ನಮ್ಮನ್ನು ಇಲ್ಲಿಗೆ ತಂದಿಟ್ಟಿದ್ದು ಯಾರೂ ಇತ್ತ ತಿರುಗಿಯೂ ನೋಡುತ್ತಿಲ್ಲ ಎಂದು ದೂರಿದ್ದಾರೆ.

ಶೌಚಾಲಯ ಒಂದೇ ಇದ್ದು ತುಂಬಾ ಸಮಸ್ಯೆಯಾಗುತ್ತಿದೆ. 40 ಜನರು ಒಂದೇ ಕಡೆ ಶೌಚಕ್ಕೆ ಹೋಗುವುದೆಂದರೆ ಎಂತಹ ಸಂಕಟದ ಸನ್ನಿವೇಶ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಮುಂಜಾನೆಯೇ ಎದ್ದು ಸರದಿ ಸಾಲಿನಲ್ಲಿ ನಿಲ್ಲಬೇಕು. ಅದನ್ನು ತಡೆದುಹಿಡಿಯುವುದು ಕಷ್ಟದ, ನೋವಿನ ಕೆಲಸ. ಉಸ್ತುವಾರಿ ವಹಿಸಿರುವವರು ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ತುಮಕೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ #NaanuGauri #COVID19

Posted by Naanu Gauri on Friday, August 14, 2020

ಕೇಂದ್ರದ ಉಸ್ತುವಾರಿ ವಹಿಸಿರುವವರಿಗೆ ಸಮಸ್ಯೆಗಳನ್ನು ಹೇಳಿದರೆ ಕೇಳುವುದಿಲ್ಲ. ಎಲ್ಲದಕ್ಕೂ ಪೊಲೀಸರಿಗೆ ಹೇಳುತ್ತೇವೆ ಎಂದು ಭಯ ಹುಟ್ಟಿಸುತ್ತಾರೆ. ನಾವು ಬಂದು ಏಳು ದಿನವಾಯ್ತು. ಐಸೋಲೇನ್ ಅವಧಿ ಏಳು ದಿನ ನಿಗದಿ ಮಾಡಿತ್ತು. ಆದರೂ ನಮ್ಮನ್ನು ಬಿಡುಗಡೆಗೊಳಿಸುತ್ತಿಲ್ಲ. ಈಗ ಹತ್ತು ದಿನ ಇರಬೇಕು ಎಂದು ಹೇಳುತ್ತಿದ್ದಾರೆ. ಯಾವುದೇ ಸೌಲಭ್ಯಗಳು ಇಲ್ಲ. ಇಂತಹ ಕೇಂದ್ರದಲ್ಲಿ ಇರುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲೂ ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆಯೆಂಬ ಬಗ್ಗೆ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಅದೂ ಕೂಡ ವೈರಲ್ ಆಗಿತ್ತು. ಈಗ ಕೋವಿಡ್ ಕೇರ್ ಕೇಂದ್ರದಲ್ಲೂ ಅದೇ ಪರಿಸ್ಥಿತಿ ಇದ್ದು ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂಸಿದಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಕಟ ರಾಷ್ಟ್ರ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಜೇಂದ್ರ ಕುಮಾರ್ ಗೌಡ ಹೇಳಿಕೆ ನೀಡಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಮಾಡದೆ ಇದ್ದ ಮೇಲೆ ಕೊರೊನ ಸೋಂಕಿತರನ್ನು ಸೇರಿಸಿ ಹಿಂಸೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಸೂಕ್ತ ಕ್ರಮ ಕೈಗೊಂಡು ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಮನೆಯಲ್ಲೇ ಚಿಕಿತ್ಸೆ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...