Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...