Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...