Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...