Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...