Homeಕರ್ನಾಟಕಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

ಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

- Advertisement -
- Advertisement -

ಕರ್ನಾಟಕ ಸರ್ಕಾರದ ಬಹು ಮಹತ್ವಕಾಂಕ್ಷೆಯ ವಿವಾದಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣ ವಿಧೇಯಕ, 2021) ಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿ: ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. E vishayadalli yaru yenu tiliyade aakshepane madabardu munde onda dina nam hindu sanskruti dharma vichar achara yalla mare yaguttide nanu obba central job holder.
    Own my experience in tamilnadu kerala and andra Pradesh bhal speed aagi dharma parivartane aagtide aaddarinda stalin,peter,etc tarahad names aagtive addarind nammalliye kelavu sc,st,cast feeling maretu yalla ondagi balon dayavittu sahakarisi

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...