Homeಕರ್ನಾಟಕಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

ಪರಿಷತ್‌ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ಮಸೂದೆ: ಸರ್ಕಾರದ ಮುಂದಿನ ನಡೆಯೇನು?

- Advertisement -
- Advertisement -

ಕರ್ನಾಟಕ ಸರ್ಕಾರದ ಬಹು ಮಹತ್ವಕಾಂಕ್ಷೆಯ ವಿವಾದಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣ ವಿಧೇಯಕ, 2021) ಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿ: ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. E vishayadalli yaru yenu tiliyade aakshepane madabardu munde onda dina nam hindu sanskruti dharma vichar achara yalla mare yaguttide nanu obba central job holder.
    Own my experience in tamilnadu kerala and andra Pradesh bhal speed aagi dharma parivartane aagtide aaddarinda stalin,peter,etc tarahad names aagtive addarind nammalliye kelavu sc,st,cast feeling maretu yalla ondagi balon dayavittu sahakarisi

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...