Homeಕರ್ನಾಟಕಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

- Advertisement -
- Advertisement -

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಮೃತಪಟ್ಟಿರುವ ಅಘಾತಕಾರಿ ಘಟನೆ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯ ಸೋಮವಾರ ಸಂಭವಿಸಿದೆ. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ.

ಆದರೆ, ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

“ಭಾನುವಾರ ಬೆಳಿಗ್ಗೆ ಮತ್ತು ಸೋಮವಾರ ಬೆಳಿಗ್ಗೆ ನಡುವೆ ಒಟ್ಟು 24 ಸಾವುಗಳು ಸಂಭವಿಸಿವೆ. ಜಿಲ್ಲಾ ಹಾಸ್ಪಿಟಲ್‌ನಲ್ಲಿ 23 ಮಂದಿ ಸಾವನ್ನಪ್ಪಿದ್ದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಲ್ಲಾ ರೋಗಿಗಳೂ ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುವುದಿಲ್ಲ” ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದ್ದಾರೆಂದು DH ವರದಿ ಮಾಡಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಆಮ್ಲಜನಕದ ಕೊರತೆಯಿಂದಾಗಿ 12 ಸಾವುಗಳು ಸಂಭವಿಸಿವೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ದೃಡಪಡಿಸಿದ್ದು, ಇತರರು ವಿವಿಧ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ದುರದೃಷ್ಟವಶಾತ್, ಆಸ್ಪತ್ರೆಯಲ್ಲಿನ ಆಮ್ಲಜನಕದ ಸ್ಥಾವರವು ಭಾನುವಾರ ರಾತ್ರಿಯಿಂದಲೆ ಆಮ್ಲಜನಕದ ಕೊರತೆಯನ್ನು ಹೊಂದಿತ್ತು ಎಂದು ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ DH ವರದಿ ಮಾಡಿದೆ. ಆಸ್ಪತ್ರೆಯ ಆವರಣದಲ್ಲಿರುವ 6,000 ಲೀಟರ್ ಸಾಮರ್ಥ್ಯದ ಆಮ್ಲಜನಕ ಸ್ಥಾವರವು 1.5 ದಿನಗಳವರೆಗೆ ಆಮ್ಲಜನಕದ ಅಗತ್ಯವನ್ನು ಉಳಿಸಿಕೊಳ್ಳಬಲ್ಲದು, ಆದರೆ ಇದರಲ್ಲಿನ ಸಂಗ್ರಹವು ಭಾನುವಾರ ಸಂಜೆಯೆ ಮುಗಿದಿತ್ತು ಎನ್ನಲಾಗಿದೆ.

ಮೃತ ರೋಗಿಗಳ ಸಂಬಂಧಿಕರು ಚಾಮರಾಜನಗರ ಆಸ್ಪತ್ರೆಯ ಹೊರಗೆ ಜಮಾಯಿಸಿ ಅವ್ಯವಸ್ಥೆಗೆ ಅಧಿಕಾರಿಗಳನ್ನು ದೂಷಿಸಿದ್ದಾರೆ. ಕೊರೊನಾ ರೋಗಿಗಳಿಗೆ ಮಧ್ಯರಾತ್ರಿಯಲ್ಲಿ ಟವೆಲ್‌ಗಳನ್ನು ಬೀಸುವ ವಿಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Kerala Election Results 2021 | `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೆ ಸ್ಥಾನ

ಮೃತಪಟ್ಟವರಲ್ಲಿ ಹೆಚ್ಚಿನವರು 30-40 ವಯಸ್ಸಿಗೆ ಸೇರಿದವರಾಗಿದ್ದು, ಅವರಲ್ಲಿ ಕೆಲವರು ಕೆಲವೇ ತಿಂಗಳ ಹಿಂದೆ ವಿವಾಹವಾದವರು ಕೂಡಾ ಇದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, “ಪ್ರತಿಯೊಂದು ಜೀವನವೂ ಅಮೂಲ್ಯವಾದುದು. ಘಟನೆಯ ಬಗ್ಗೆ ವರದಿಯನ್ನು ಕೋರಿದ್ದು, ಅದು ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚಿನ ಸಂದರ್ಭಗಳಲ್ಲಿ ಜನರು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಆದರೆ ಮೂರು ದಿನಗಳ ಹಿಂದೆಯಷ್ಟೇ ಜಿಲ್ಲೆಗೆ ಭೇಟಿ ನೀಡಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ ಎಂದು ಹೇಳಿದ್ದರು, ಜೊತೆಗೆ ಚಾಮರಾಜನಗರದಲ್ಲಿ ಆರು ಸಾವಿರ ಲೀಟರ್ ಆಮ್ಲಜನಕದ ಘಟಕಕ್ಕೆ ಚಾಲನೆ ನೀಡಲಾಗಿದ್ದು, ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆ ಸಮಸ್ಯೆ ಇರುವುದಿಲ್ಲ ಎಂದು ಕೂಡಾ ಹೇಳಿದ್ದರು.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

 

ನೆರೆಯ ಮೈಸೂರು ಜಿಲ್ಲೆಯಿಂದ ಬರಬೇಕಿದ್ದ ಆಮ್ಲಜನಕದ ಪೂರೈಕೆಯು ಸಮಯಕ್ಕೆ ಸರಿಯಾಗಿ ಸಿಗಲಿಲ್ಲ, ಇದು ದುರಂತಕ್ಕೆ ಕಾರಣವಾಗಿದೆ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು DH ಉಲ್ಲೇಖಿಸಿದೆ.

ಆದರೆ, ಭಾನುವಾರ ಮಧ್ಯರಾತ್ರಿಯ ವೇಳೆಗೆ ಒಟ್ಟು 250 ಆಮ್ಲಜನಕ ಸಿಲಿಂಡರ್‌ಗಳನ್ನು ಚಾಮರಾಜನಗರಕ್ಕೆ ಕಳುಹಿಸಲಾಗಿದೆ ಮತ್ತು ಮೈಸೂರು ಜಿಲ್ಲಾಡಳಿತದಿಂದ ಯಾವುದೇ ವಿಳಂಬವಾಗಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 24 ವೆಂಟಿಲೇಟರ್‌ಗಳು, 53 ಐಸಿಯು ಹಾಸಿಗೆಗಳು ಮತ್ತು 55 ಆಮ್ಲಜನಕಯುಕ್ತ ಹಾಸಿಗೆಗಳಿವೆ. ಈ ಎಲ್ಲಾ ಹಾಸಿಗೆಗಳು ಈಗಾಗಲೆ ತುಂಬಿದೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...