Homeಕರ್ನಾಟಕಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

- Advertisement -
- Advertisement -

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಮೃತಪಟ್ಟಿರುವ ಅಘಾತಕಾರಿ ಘಟನೆ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯ ಸೋಮವಾರ ಸಂಭವಿಸಿದೆ. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ.

ಆದರೆ, ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

“ಭಾನುವಾರ ಬೆಳಿಗ್ಗೆ ಮತ್ತು ಸೋಮವಾರ ಬೆಳಿಗ್ಗೆ ನಡುವೆ ಒಟ್ಟು 24 ಸಾವುಗಳು ಸಂಭವಿಸಿವೆ. ಜಿಲ್ಲಾ ಹಾಸ್ಪಿಟಲ್‌ನಲ್ಲಿ 23 ಮಂದಿ ಸಾವನ್ನಪ್ಪಿದ್ದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಲ್ಲಾ ರೋಗಿಗಳೂ ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುವುದಿಲ್ಲ” ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದ್ದಾರೆಂದು DH ವರದಿ ಮಾಡಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಆಮ್ಲಜನಕದ ಕೊರತೆಯಿಂದಾಗಿ 12 ಸಾವುಗಳು ಸಂಭವಿಸಿವೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ದೃಡಪಡಿಸಿದ್ದು, ಇತರರು ವಿವಿಧ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ದುರದೃಷ್ಟವಶಾತ್, ಆಸ್ಪತ್ರೆಯಲ್ಲಿನ ಆಮ್ಲಜನಕದ ಸ್ಥಾವರವು ಭಾನುವಾರ ರಾತ್ರಿಯಿಂದಲೆ ಆಮ್ಲಜನಕದ ಕೊರತೆಯನ್ನು ಹೊಂದಿತ್ತು ಎಂದು ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ DH ವರದಿ ಮಾಡಿದೆ. ಆಸ್ಪತ್ರೆಯ ಆವರಣದಲ್ಲಿರುವ 6,000 ಲೀಟರ್ ಸಾಮರ್ಥ್ಯದ ಆಮ್ಲಜನಕ ಸ್ಥಾವರವು 1.5 ದಿನಗಳವರೆಗೆ ಆಮ್ಲಜನಕದ ಅಗತ್ಯವನ್ನು ಉಳಿಸಿಕೊಳ್ಳಬಲ್ಲದು, ಆದರೆ ಇದರಲ್ಲಿನ ಸಂಗ್ರಹವು ಭಾನುವಾರ ಸಂಜೆಯೆ ಮುಗಿದಿತ್ತು ಎನ್ನಲಾಗಿದೆ.

ಮೃತ ರೋಗಿಗಳ ಸಂಬಂಧಿಕರು ಚಾಮರಾಜನಗರ ಆಸ್ಪತ್ರೆಯ ಹೊರಗೆ ಜಮಾಯಿಸಿ ಅವ್ಯವಸ್ಥೆಗೆ ಅಧಿಕಾರಿಗಳನ್ನು ದೂಷಿಸಿದ್ದಾರೆ. ಕೊರೊನಾ ರೋಗಿಗಳಿಗೆ ಮಧ್ಯರಾತ್ರಿಯಲ್ಲಿ ಟವೆಲ್‌ಗಳನ್ನು ಬೀಸುವ ವಿಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Kerala Election Results 2021 | `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೆ ಸ್ಥಾನ

ಮೃತಪಟ್ಟವರಲ್ಲಿ ಹೆಚ್ಚಿನವರು 30-40 ವಯಸ್ಸಿಗೆ ಸೇರಿದವರಾಗಿದ್ದು, ಅವರಲ್ಲಿ ಕೆಲವರು ಕೆಲವೇ ತಿಂಗಳ ಹಿಂದೆ ವಿವಾಹವಾದವರು ಕೂಡಾ ಇದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, “ಪ್ರತಿಯೊಂದು ಜೀವನವೂ ಅಮೂಲ್ಯವಾದುದು. ಘಟನೆಯ ಬಗ್ಗೆ ವರದಿಯನ್ನು ಕೋರಿದ್ದು, ಅದು ಇಂದು ಮಧ್ಯಾಹ್ನದ ವೇಳೆಗೆ ಬರಲಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚಿನ ಸಂದರ್ಭಗಳಲ್ಲಿ ಜನರು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಆದರೆ ಮೂರು ದಿನಗಳ ಹಿಂದೆಯಷ್ಟೇ ಜಿಲ್ಲೆಗೆ ಭೇಟಿ ನೀಡಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ ಎಂದು ಹೇಳಿದ್ದರು, ಜೊತೆಗೆ ಚಾಮರಾಜನಗರದಲ್ಲಿ ಆರು ಸಾವಿರ ಲೀಟರ್ ಆಮ್ಲಜನಕದ ಘಟಕಕ್ಕೆ ಚಾಲನೆ ನೀಡಲಾಗಿದ್ದು, ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆ ಸಮಸ್ಯೆ ಇರುವುದಿಲ್ಲ ಎಂದು ಕೂಡಾ ಹೇಳಿದ್ದರು.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

 

ನೆರೆಯ ಮೈಸೂರು ಜಿಲ್ಲೆಯಿಂದ ಬರಬೇಕಿದ್ದ ಆಮ್ಲಜನಕದ ಪೂರೈಕೆಯು ಸಮಯಕ್ಕೆ ಸರಿಯಾಗಿ ಸಿಗಲಿಲ್ಲ, ಇದು ದುರಂತಕ್ಕೆ ಕಾರಣವಾಗಿದೆ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು DH ಉಲ್ಲೇಖಿಸಿದೆ.

ಆದರೆ, ಭಾನುವಾರ ಮಧ್ಯರಾತ್ರಿಯ ವೇಳೆಗೆ ಒಟ್ಟು 250 ಆಮ್ಲಜನಕ ಸಿಲಿಂಡರ್‌ಗಳನ್ನು ಚಾಮರಾಜನಗರಕ್ಕೆ ಕಳುಹಿಸಲಾಗಿದೆ ಮತ್ತು ಮೈಸೂರು ಜಿಲ್ಲಾಡಳಿತದಿಂದ ಯಾವುದೇ ವಿಳಂಬವಾಗಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 24 ವೆಂಟಿಲೇಟರ್‌ಗಳು, 53 ಐಸಿಯು ಹಾಸಿಗೆಗಳು ಮತ್ತು 55 ಆಮ್ಲಜನಕಯುಕ್ತ ಹಾಸಿಗೆಗಳಿವೆ. ಈ ಎಲ್ಲಾ ಹಾಸಿಗೆಗಳು ಈಗಾಗಲೆ ತುಂಬಿದೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...