Homeಕರೋನಾ ತಲ್ಲಣಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

- Advertisement -
- Advertisement -

ಉತ್ತರಪ್ರದೇಶದಲ್ಲಿ ಆಮ್ಲಜನಕ ಸಿಲಿಂಡರ್ ಪಡೆಯಲು ಜನರು ಹತಾಶರಾಗಿ ಯತ್ನಿಸುತ್ತಿರುವ, ಬೆಡ್‌ಗಳು ಸಿಗದೇ ರೋಗಿಗಳು ಪರದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಿಕ್ಕಿಯಿರುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವರದೇ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಕಳೆದ ಒಂದು ವಾರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಉತ್ತರಪ್ರದೇಶದ ಮೂವರು ಬಿಜೆಪಿ ಶಾಸಕರು ಕೋವಿಡ್‌ಗೆ ಬಲಿಯಾಗಿದ್ದು, ಮತ್ತು ನಿನ್ನೆ ಆಮ್ಲಜನಕ ಕೊರತೆಯಿಂದ 7 ಸಾರ್ವಜನಿಕರು ಅಸುನೀಗಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ.

‘ಆಮ್ಲಜನಕ ಅಥವಾ ರೆಮ್ಡೆಸಿವಿರ್ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವ ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಲಖನೌದಿಂದ 300 ಕಿಲೋಮೀಟರ್ ದೂರದಲ್ಲಿರುವ ಗೋರಖ್‌ಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ರೆಮ್‌ಡೆಸಿವಿರ್ ವಿತರಿಸಲಾಯಿತು. ಗೋರಖ್‌ಪುರದ ಡಿಎಂ ಕಚೇರಿಯ ಹೊರಗೆ ಔಷಧಿಗಾಗಿ ಜನರ ದೀರ್ಘ ಸರತಿ ಕಾಣಿಸಿಕೊಂಡಿತು. ಚುಚ್ಚುಮದ್ದಿನ ಎರಡು ಬಾಟಲುಗಳನ್ನು ಪಡೆಯಲು ಸುಮಾರು 24 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಜನರು ಹೇಳಿದ್ದನ್ನೂ ಉಲ್ಲೇಖಿಸಿರುವ ಉತ್ತರಪ್ರದೇಶ ಬಿಜೆಪಿ ನಾಯಕರು ಯೋಗಿ ಸರ್ಕಾರದ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಆಗ್ರಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಪಡೆಯಲು ಒಬ್ಬ ವ್ಯಕ್ತಿಯು ಪೊಲೀಸರ ಪಾದಕ್ಕೆ ಬೀಳುತ್ತಾರೆ. ಅದೇ ರೀತಿ, ಮತ್ತೊಂದು ವೀಡಿಯೊದಲ್ಲಿ, ನೋಯ್ಡಾದಲ್ಲಿ ಮಹಿಳೆಯೊಬ್ಬರು ರೆಮ್ಡೆಸಿವಿಯರ್ ಪಡೆಯಲು ಆರೋಗ್ಯ ಅಧಿಕಾರಿಯ ಪಾದಗಳಿಗೆ ನಮಸ್ಕರಿಸಿ ಬೇಡಿಕೊಳ್ಳುತ್ತಿದ್ದಾರೆ. ‘ಹೀಗೇ ಒತ್ತಾಯಿಸಿದರೆ ಜೈಲಿಗೆ ಕಳುಹಿಸುವುದಾಗಿ’ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

ಲಕ್ನೋದಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಬಾಗಪತ್ ಜಿಲ್ಲೆಯ ವೀಡಿಯೊವೊಂದರಲ್ಲಿ, ಸರ್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳು ಹಾಸಿಗೆಯಿಂದ ಕೆಳಕ್ಕೆ ಬಿದ್ದು ನೆಲದ ಮೇಲೆ ಬಿದ್ದಿರುವುದನ್ನು ತೋರಿಸಲಾಗಿದೆ. ಅವರನ್ನು ಮತ್ತೆ ಹಾಸಿಗೆಯ ಮೇಲೆ ಇರಿಸಲು ಮತ್ತು ಅವರ ಬಾಯಿಗೆ ಆಮ್ಲಜನಕದ ಮಾಸ್ಕ್ ಅನ್ನು ಹಾಕಲು ವಾರ್ಡ್‌ನಲ್ಲಿ ಯಾರೂ ಇರಲಿಲ್ಲ. ರಾಜಧಾನಿಯಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಮೊರಾದಾಬಾದ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದ ಏಳು ರೋಗಿಗಳು, ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯ ನಂತರವೂ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದಾರೆ ಎಂದು ರೋಗಿಗಳ ಪರಿಚಾರಕರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಮೂವರು ಬಿಜೆಪಿ ಶಾಸಕರಾದ ಸುರೇಶ್ ಶ್ರೀವಾಸ್ತವ, ರಮೇಶ್ ದಿವಾಕರ್ ಮತ್ತು ಕೇಸರ್ ಸಿಂಗ್ ಗಂಗ್ವಾರ್ ಅವರು ಕೋವಿಡ್‌ನಿಂದ ನಿಧನರಾದ ನಂತರ ಆದಿತ್ಯನಾಥ್ ತಮ್ಮದೇ ಪಕ್ಷದ ಮುಖಂಡರ ಆಕ್ರೋಶಕ್ಕೆ ಒಳಗಾಗಿದ್ದಾರೆ. ಗಂಗ್ವಾರ್ ಅವರ ಕುಟುಂಬ ಸದಸ್ಯರ ಪ್ರಕಾರ, ದೆಹಲಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವಂತೆ ಶಾಸಕರು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಸಹಾಯ ದೊರೆತಿಲ್ಲ.

ತಮ್ಮ ಪಕ್ಷದ ಶಾಸಕರಿಗೇ ಚಿಕಿತ್ಸೆ ಕೊಡಿಸುವಲ್ಲಿ ಮುಖ್ಯಮಂತ್ರಿ ಯೋಗಿ ವಿಫಲರಾಗಿದ್ದಾರೆ ಎಂದು ಗಂಗ್ವಾರ್ ಅವರ ಪುತ್ರ ವಿಶಾಲ್ ಆದಿತ್ಯನಾಥ್ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಯುಪಿ ಸರ್ಕಾರವು ಶಾಸಕರಿಗೆ ವೈದ್ಯಕೀಯ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ. ನಾನು ಮುಖ್ಯಮಂತ್ರಿ ಕಚೇರಿಗೆ ಹಲವಾರು ಬಾರಿ ಕರೆ ಮಾಡಲು ಪ್ರಯತ್ನಿಸಿದೆ. ಆದರೆ ಯಾರೂ ಕರೆಗಳನ್ನು ಸ್ವೀಕರಿಸಲಿಲ್ಲ” ಎಂದು ವಿಶಾಲ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ತಂದೆಯ ಸಾವಿಗೆ ‘ಯುಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಬೇಕು’ ಎಂದು ವಿಶಾಲ್ ವ್ಯಂಗ್ಯವಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಸಾಮಾನ್ಯ ಹಾಸಿಗೆ, ಆಕ್ಸಿಜನ್ ಕೊರತೆ, ಚಿಕಿತ್ಸೆಯ ಕೊರತೆಯಿಂದ ದಿನವೂ ನೂರಾರು ಕೋವಿಡ್ ಸಾವುಗಳು ಸಂಭವಿಸುತ್ತಿದ್ದರೂ, ಎಲ್ಲ ಸರಿಯಾಗಿದೆ ಎಂದು ಹೇಳುತ್ತ ಬಂದ ಯೋಗಿ ಆದಿತ್ಯನಾಥ ಮತ್ತು ಅವರ ಬೆಂಬಲಿಗರ ವಿರುದ್ಧ ಈಗ ಸ್ವಪಕ್ಷ ನಾಯಕರೇ ತಿರುಗಿ ಬಿದ್ದಿದ್ದಾರೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...