Homeಕರೋನಾ ತಲ್ಲಣಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

- Advertisement -
- Advertisement -

ಉತ್ತರಪ್ರದೇಶದಲ್ಲಿ ಆಮ್ಲಜನಕ ಸಿಲಿಂಡರ್ ಪಡೆಯಲು ಜನರು ಹತಾಶರಾಗಿ ಯತ್ನಿಸುತ್ತಿರುವ, ಬೆಡ್‌ಗಳು ಸಿಗದೇ ರೋಗಿಗಳು ಪರದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಿಕ್ಕಿಯಿರುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವರದೇ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಕಳೆದ ಒಂದು ವಾರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಉತ್ತರಪ್ರದೇಶದ ಮೂವರು ಬಿಜೆಪಿ ಶಾಸಕರು ಕೋವಿಡ್‌ಗೆ ಬಲಿಯಾಗಿದ್ದು, ಮತ್ತು ನಿನ್ನೆ ಆಮ್ಲಜನಕ ಕೊರತೆಯಿಂದ 7 ಸಾರ್ವಜನಿಕರು ಅಸುನೀಗಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ.

‘ಆಮ್ಲಜನಕ ಅಥವಾ ರೆಮ್ಡೆಸಿವಿರ್ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವ ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಲಖನೌದಿಂದ 300 ಕಿಲೋಮೀಟರ್ ದೂರದಲ್ಲಿರುವ ಗೋರಖ್‌ಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ರೆಮ್‌ಡೆಸಿವಿರ್ ವಿತರಿಸಲಾಯಿತು. ಗೋರಖ್‌ಪುರದ ಡಿಎಂ ಕಚೇರಿಯ ಹೊರಗೆ ಔಷಧಿಗಾಗಿ ಜನರ ದೀರ್ಘ ಸರತಿ ಕಾಣಿಸಿಕೊಂಡಿತು. ಚುಚ್ಚುಮದ್ದಿನ ಎರಡು ಬಾಟಲುಗಳನ್ನು ಪಡೆಯಲು ಸುಮಾರು 24 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಜನರು ಹೇಳಿದ್ದನ್ನೂ ಉಲ್ಲೇಖಿಸಿರುವ ಉತ್ತರಪ್ರದೇಶ ಬಿಜೆಪಿ ನಾಯಕರು ಯೋಗಿ ಸರ್ಕಾರದ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಆಗ್ರಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಪಡೆಯಲು ಒಬ್ಬ ವ್ಯಕ್ತಿಯು ಪೊಲೀಸರ ಪಾದಕ್ಕೆ ಬೀಳುತ್ತಾರೆ. ಅದೇ ರೀತಿ, ಮತ್ತೊಂದು ವೀಡಿಯೊದಲ್ಲಿ, ನೋಯ್ಡಾದಲ್ಲಿ ಮಹಿಳೆಯೊಬ್ಬರು ರೆಮ್ಡೆಸಿವಿಯರ್ ಪಡೆಯಲು ಆರೋಗ್ಯ ಅಧಿಕಾರಿಯ ಪಾದಗಳಿಗೆ ನಮಸ್ಕರಿಸಿ ಬೇಡಿಕೊಳ್ಳುತ್ತಿದ್ದಾರೆ. ‘ಹೀಗೇ ಒತ್ತಾಯಿಸಿದರೆ ಜೈಲಿಗೆ ಕಳುಹಿಸುವುದಾಗಿ’ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

ಲಕ್ನೋದಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಬಾಗಪತ್ ಜಿಲ್ಲೆಯ ವೀಡಿಯೊವೊಂದರಲ್ಲಿ, ಸರ್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳು ಹಾಸಿಗೆಯಿಂದ ಕೆಳಕ್ಕೆ ಬಿದ್ದು ನೆಲದ ಮೇಲೆ ಬಿದ್ದಿರುವುದನ್ನು ತೋರಿಸಲಾಗಿದೆ. ಅವರನ್ನು ಮತ್ತೆ ಹಾಸಿಗೆಯ ಮೇಲೆ ಇರಿಸಲು ಮತ್ತು ಅವರ ಬಾಯಿಗೆ ಆಮ್ಲಜನಕದ ಮಾಸ್ಕ್ ಅನ್ನು ಹಾಕಲು ವಾರ್ಡ್‌ನಲ್ಲಿ ಯಾರೂ ಇರಲಿಲ್ಲ. ರಾಜಧಾನಿಯಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಮೊರಾದಾಬಾದ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದ ಏಳು ರೋಗಿಗಳು, ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯ ನಂತರವೂ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದಾರೆ ಎಂದು ರೋಗಿಗಳ ಪರಿಚಾರಕರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಮೂವರು ಬಿಜೆಪಿ ಶಾಸಕರಾದ ಸುರೇಶ್ ಶ್ರೀವಾಸ್ತವ, ರಮೇಶ್ ದಿವಾಕರ್ ಮತ್ತು ಕೇಸರ್ ಸಿಂಗ್ ಗಂಗ್ವಾರ್ ಅವರು ಕೋವಿಡ್‌ನಿಂದ ನಿಧನರಾದ ನಂತರ ಆದಿತ್ಯನಾಥ್ ತಮ್ಮದೇ ಪಕ್ಷದ ಮುಖಂಡರ ಆಕ್ರೋಶಕ್ಕೆ ಒಳಗಾಗಿದ್ದಾರೆ. ಗಂಗ್ವಾರ್ ಅವರ ಕುಟುಂಬ ಸದಸ್ಯರ ಪ್ರಕಾರ, ದೆಹಲಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವಂತೆ ಶಾಸಕರು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಸಹಾಯ ದೊರೆತಿಲ್ಲ.

ತಮ್ಮ ಪಕ್ಷದ ಶಾಸಕರಿಗೇ ಚಿಕಿತ್ಸೆ ಕೊಡಿಸುವಲ್ಲಿ ಮುಖ್ಯಮಂತ್ರಿ ಯೋಗಿ ವಿಫಲರಾಗಿದ್ದಾರೆ ಎಂದು ಗಂಗ್ವಾರ್ ಅವರ ಪುತ್ರ ವಿಶಾಲ್ ಆದಿತ್ಯನಾಥ್ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಯುಪಿ ಸರ್ಕಾರವು ಶಾಸಕರಿಗೆ ವೈದ್ಯಕೀಯ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ. ನಾನು ಮುಖ್ಯಮಂತ್ರಿ ಕಚೇರಿಗೆ ಹಲವಾರು ಬಾರಿ ಕರೆ ಮಾಡಲು ಪ್ರಯತ್ನಿಸಿದೆ. ಆದರೆ ಯಾರೂ ಕರೆಗಳನ್ನು ಸ್ವೀಕರಿಸಲಿಲ್ಲ” ಎಂದು ವಿಶಾಲ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ತಂದೆಯ ಸಾವಿಗೆ ‘ಯುಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಬೇಕು’ ಎಂದು ವಿಶಾಲ್ ವ್ಯಂಗ್ಯವಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಸಾಮಾನ್ಯ ಹಾಸಿಗೆ, ಆಕ್ಸಿಜನ್ ಕೊರತೆ, ಚಿಕಿತ್ಸೆಯ ಕೊರತೆಯಿಂದ ದಿನವೂ ನೂರಾರು ಕೋವಿಡ್ ಸಾವುಗಳು ಸಂಭವಿಸುತ್ತಿದ್ದರೂ, ಎಲ್ಲ ಸರಿಯಾಗಿದೆ ಎಂದು ಹೇಳುತ್ತ ಬಂದ ಯೋಗಿ ಆದಿತ್ಯನಾಥ ಮತ್ತು ಅವರ ಬೆಂಬಲಿಗರ ವಿರುದ್ಧ ಈಗ ಸ್ವಪಕ್ಷ ನಾಯಕರೇ ತಿರುಗಿ ಬಿದ್ದಿದ್ದಾರೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...