Homeಕರ್ನಾಟಕಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ಖಾಸಗಿ ಆಸ್ಪತ್ರೆ ಕಿಮ್ಸ್‌ನಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ತಿಳಿದ ಕೂಡಲೇ ಆಂಬುಲೆನ್ಸ್ ಮೂಲಕ ರೋಗಿಗಳನ್ನು ನಗರದ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೆಂಪೆಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ನಲ್ಲಿ ಆಮ್ಲಜನಕ ವಿತರಣೆಯ ಕೊರತೆಯಿಂದ, ಕೊರೊನಾ ವೈರಸ್ ರೋಗಿಗಳು ಮತ್ತು ಆಮ್ಲಜನಕದ ಬೆಂಬಲದಲ್ಲಿರುವ ಇತರ ರೊಗಿಗಳು ಸೇರಿದಂತೆ ಸುಮಾರು 50 ರೋಗಿಗಳನ್ನು ಸೋಮವಾರ ರಾತ್ರಿ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಸೋಮವಾರ ತಡರಾತ್ರಿ ಕಿಮ್ಸ್ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ, ಆಂಬ್ಯುಲೆನ್ಸ್‌ಗಳಲ್ಲಿ ರೋಗಿಗಳು ಹೋಗುತ್ತಿರುವ ವೀಡಿಯೋ ದೃಶ್ಯಗಳು ಹರಿದಾಡುತ್ತಿವೆ.

ದ್ರವ ಆಮ್ಲಜನಕ ಪೂರೈಕೆಗಾಗಿ ಇನ್ನು ಮುಂದೆ ಕಾಯುವುದಿಲ್ಲ ಮತ್ತು ರೋಗಿಗಳನ್ನು ಇತರ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಪ್ರಾರಂಭಿಸಬಹುದು ಎಂದು ಆಸ್ಪತ್ರೆಯ ಅಧಿಕಾರಿಗಳು ನಿರ್ಧರಿಸಿದ ನಂತರ ರೋಗಿಗಳನ್ನು ಸ್ಥಳಾಂತರಿಸಲು 45 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು.

ಖಾಸಗಿ ಆಸ್ಪತ್ರೆ ಕಿಮ್ಸ್‌ನಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ತಿಳಿದ ಕೂಡಲೇ ಆಂಬುಲೆನ್ಸ್ ಮೂಲಕ ರೋಗಿಗಳನ್ನು ನಗರದ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಗಂಭೀರ ರೋಗಿಗಳ ಚಿಕಿತ್ಸೆಗಾಗಿ 20 ಆಕ್ಸಿಜನ್ ಸಿಲಿಂಡರ್‌ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಕೊರೊನಾ ಹೊಂದಿರುವವರು ಸೇರಿದಂತೆ ಸುಮಾರು 50 ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

ಉತ್ಪಾದನಾ ಕಂಪನಿಯಿಂದ ದ್ರವ ಆಮ್ಲಜನಕದ ಕೊರತೆಯಿಂದಾಗಿ, ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಹಾಗಾಗಿ ಇತರ ಪೂರೈಕೆದಾರರಿಂದ ದ್ರವ ಆಮ್ಲಜನಕದ ವ್ಯವಸ್ಥೆ ಮಾಡುವಂತೆ ಕೋರಲಾಗಿದೆ ಎಂದು ಕಿಮ್ಸ್ ಹೇಳಿಕೆಯಲ್ಲಿ ತಿಳಿಸಿದೆ.

‘ಆಮ್ಲಜನಕ ಅವಲಂಬಿತ ರೋಗಿಗಳಿಗೆ ಕಡಿಮೆ ಆಮ್ಲಜನಕದ ಪರಿಮಾಣದ ಹೈಪೊಕ್ಸಿಕ್ ಬಿಕ್ಕಟ್ಟು ಸಂಭವಿಸಬಹುದು ಎಂದು ನಾವು ಊಹಿಸಿದ್ದೇವೆ. ಹಾನಿ ನಿಯಂತ್ರಣಕ್ಕಾಗಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಗಾಗಿ, ನಾವು ಎಲ್ಲಾ ಆಮ್ಲಜನಕ-ಅವಲಂಬಿತ ರೋಗಿಗಳನ್ನು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಯೋಜಿಸಿದ್ದೇವೆ’ ಎಂದು ತಿಳಿಸಲಾಗಿದೆ.

“ಈ ಬಿಕ್ಕಟ್ಟಿನ ಸಂದರ್ಭದಲ್ಲಿ, ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ತಕ್ಷಣವೇ ನಮ್ಮ ಕರೆಗೆ ಸ್ಪಂದಿಸಿದರು ಮತ್ತು ರೋಗಿಗಳ ಜೀವ ಉಳಿಸಲು ಮ್ಯಾನೇಜ್ಮೆಂಟ್ ನೊಂದಿಗೆ ಕೈಜೋಡಿಸುವ ಮೂಲಕ ನಮಗೆ ಬೆಂಬಲ ನೀಡಿದರು. ಅವರ ಸಹಕಾರಕ್ಕಾಗಿ ನಾವು ಋಣಿಯಾಗಿದ್ದೇವೆ” ಎಂದು ಅದು ಹೇಳಿದೆ.

ನೇಮಕಗೊಂಡ ಗುತ್ತಿಗೆದಾರರು ಎರಡು ದಿನಗಳಿಂದ ಆಮ್ಲಜನಕವನ್ನು ತಲುಪಿಸುವಲ್ಲಿ ವಿಫಲವಾದ ಕಾರಣ ಆಸ್ಪತ್ರೆಯ ಅಧಿಕಾರಿಗಳು ಕಳವಳಗೊಂಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.


ಇದನ್ನೂ ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...