Homeಕರ್ನಾಟಕಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ಖಾಸಗಿ ಆಸ್ಪತ್ರೆ ಕಿಮ್ಸ್‌ನಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ತಿಳಿದ ಕೂಡಲೇ ಆಂಬುಲೆನ್ಸ್ ಮೂಲಕ ರೋಗಿಗಳನ್ನು ನಗರದ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೆಂಪೆಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕಿಮ್ಸ್) ನಲ್ಲಿ ಆಮ್ಲಜನಕ ವಿತರಣೆಯ ಕೊರತೆಯಿಂದ, ಕೊರೊನಾ ವೈರಸ್ ರೋಗಿಗಳು ಮತ್ತು ಆಮ್ಲಜನಕದ ಬೆಂಬಲದಲ್ಲಿರುವ ಇತರ ರೊಗಿಗಳು ಸೇರಿದಂತೆ ಸುಮಾರು 50 ರೋಗಿಗಳನ್ನು ಸೋಮವಾರ ರಾತ್ರಿ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಸೋಮವಾರ ತಡರಾತ್ರಿ ಕಿಮ್ಸ್ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ, ಆಂಬ್ಯುಲೆನ್ಸ್‌ಗಳಲ್ಲಿ ರೋಗಿಗಳು ಹೋಗುತ್ತಿರುವ ವೀಡಿಯೋ ದೃಶ್ಯಗಳು ಹರಿದಾಡುತ್ತಿವೆ.

ದ್ರವ ಆಮ್ಲಜನಕ ಪೂರೈಕೆಗಾಗಿ ಇನ್ನು ಮುಂದೆ ಕಾಯುವುದಿಲ್ಲ ಮತ್ತು ರೋಗಿಗಳನ್ನು ಇತರ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಪ್ರಾರಂಭಿಸಬಹುದು ಎಂದು ಆಸ್ಪತ್ರೆಯ ಅಧಿಕಾರಿಗಳು ನಿರ್ಧರಿಸಿದ ನಂತರ ರೋಗಿಗಳನ್ನು ಸ್ಥಳಾಂತರಿಸಲು 45 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು.

ಖಾಸಗಿ ಆಸ್ಪತ್ರೆ ಕಿಮ್ಸ್‌ನಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ತಿಳಿದ ಕೂಡಲೇ ಆಂಬುಲೆನ್ಸ್ ಮೂಲಕ ರೋಗಿಗಳನ್ನು ನಗರದ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಗಂಭೀರ ರೋಗಿಗಳ ಚಿಕಿತ್ಸೆಗಾಗಿ 20 ಆಕ್ಸಿಜನ್ ಸಿಲಿಂಡರ್‌ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಕೊರೊನಾ ಹೊಂದಿರುವವರು ಸೇರಿದಂತೆ ಸುಮಾರು 50 ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

ಉತ್ಪಾದನಾ ಕಂಪನಿಯಿಂದ ದ್ರವ ಆಮ್ಲಜನಕದ ಕೊರತೆಯಿಂದಾಗಿ, ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಹಾಗಾಗಿ ಇತರ ಪೂರೈಕೆದಾರರಿಂದ ದ್ರವ ಆಮ್ಲಜನಕದ ವ್ಯವಸ್ಥೆ ಮಾಡುವಂತೆ ಕೋರಲಾಗಿದೆ ಎಂದು ಕಿಮ್ಸ್ ಹೇಳಿಕೆಯಲ್ಲಿ ತಿಳಿಸಿದೆ.

‘ಆಮ್ಲಜನಕ ಅವಲಂಬಿತ ರೋಗಿಗಳಿಗೆ ಕಡಿಮೆ ಆಮ್ಲಜನಕದ ಪರಿಮಾಣದ ಹೈಪೊಕ್ಸಿಕ್ ಬಿಕ್ಕಟ್ಟು ಸಂಭವಿಸಬಹುದು ಎಂದು ನಾವು ಊಹಿಸಿದ್ದೇವೆ. ಹಾನಿ ನಿಯಂತ್ರಣಕ್ಕಾಗಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಗಾಗಿ, ನಾವು ಎಲ್ಲಾ ಆಮ್ಲಜನಕ-ಅವಲಂಬಿತ ರೋಗಿಗಳನ್ನು ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಯೋಜಿಸಿದ್ದೇವೆ’ ಎಂದು ತಿಳಿಸಲಾಗಿದೆ.

“ಈ ಬಿಕ್ಕಟ್ಟಿನ ಸಂದರ್ಭದಲ್ಲಿ, ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ತಕ್ಷಣವೇ ನಮ್ಮ ಕರೆಗೆ ಸ್ಪಂದಿಸಿದರು ಮತ್ತು ರೋಗಿಗಳ ಜೀವ ಉಳಿಸಲು ಮ್ಯಾನೇಜ್ಮೆಂಟ್ ನೊಂದಿಗೆ ಕೈಜೋಡಿಸುವ ಮೂಲಕ ನಮಗೆ ಬೆಂಬಲ ನೀಡಿದರು. ಅವರ ಸಹಕಾರಕ್ಕಾಗಿ ನಾವು ಋಣಿಯಾಗಿದ್ದೇವೆ” ಎಂದು ಅದು ಹೇಳಿದೆ.

ನೇಮಕಗೊಂಡ ಗುತ್ತಿಗೆದಾರರು ಎರಡು ದಿನಗಳಿಂದ ಆಮ್ಲಜನಕವನ್ನು ತಲುಪಿಸುವಲ್ಲಿ ವಿಫಲವಾದ ಕಾರಣ ಆಸ್ಪತ್ರೆಯ ಅಧಿಕಾರಿಗಳು ಕಳವಳಗೊಂಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.


ಇದನ್ನೂ ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...