HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...