HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...