HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...