HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...