HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...