Homeಕರೋನಾ ತಲ್ಲಣರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್ ಪ್ರಮಾಣಗಳ ಕೊರತೆ ಇದೆ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಶನ್‌ನ (ಫಾನಾ) ಕಾರ್ಯಕಾರಿ ಸಮಿತಿ ಸದಸ್ಯ ಡಾ. ರಾಜಶೇಖರ್ ಅವರು ಬುಧವಾರ ಹೇಳಿದ್ದಾರೆ. ಅಗತ್ಯ ರೋಗಿಗಳಿಗೆ ಔಷಧದ ಹೆಚ್ಚುವರಿ ಸರಬರಾಜು ಮಾಡುವುದಾಗಿ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೊರೊನಾ ನಿರ್ವಹಣೆಯಲ್ಲಿ ರೆಮ್ಡಿಸಿವಿರ್ ಒಂದು ಪ್ರಮುಖ ಚುಚ್ಚುಮದ್ದು. ಕೊರೊನಾ ಮೊದಲ ಅಲೆಯ ನಂತರ, ತಯಾರಕರು ತಮ್ಮ ಉತ್ಪಾದನೆಯನ್ನು ನಿಧಾನಗೊಳಿಸಿದರು. ಆದಾಗ್ಯೂ, ಎರಡನೇ ಅಲೆಯ ತ್ವರಿತ ಆಕ್ರಮಣದಿಂದಾಗಿ ಡೋಸೇಜ್‌ಗಳ ಕೊರತೆ ಪ್ರಾರಂಭವಾಗಿತ್ತು. ಇದೀಗ ಒಂದು ವಾರದದಿಂದ ರೆಮ್‌ಡೆಸಿವಿರ್‌ನ ತೀವ್ರ ಕೊರತೆ ಇದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ಕಳೆದ ಒಂದು ದಿನದಲ್ಲಿ ಹಲವು ದಾಖಲೆ ಮಾಡಿದ ಭಾರತ!

“ಹಲವಾರು ಆಸ್ಪತ್ರೆಗಳಲ್ಲಿ ರೆಮ್ಡಿಸಿವಿರ್ ಇಂಜೆಕ್ಷನ್ ಅಗತ್ಯವಿರುವ ರೋಗಿಗಳಿದ್ದಾರೆ. ಆದಾಗ್ಯೂ, ಅಗತ್ಯವಿರುವ ರೋಗಿಗಳಲ್ಲಿ 20% ದಿಂದ 30% ರಷ್ಟು ಜನರಿಗೂ ದಾಸ್ತಾನು ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ಇಂದು ನಾವು ಸರ್ಕಾರ ಮತ್ತು ಡಿಜಿಸಿಐ ಜೊತೆ ಸಭೆ ನಡೆಸಿದ್ದೇವೆ. ನಾವು ಈ ಬಗ್ಗೆ ಎಚ್ಚರಿಸಿದ ಮಾಡಿದ ಕೆಲವೇ ಗಂಟೆಗಳಲ್ಲಿ ಅಗತ್ಯ ರೋಗಿಗಳಿಗೆ ಬೇಕಾದುದನ್ನು ಪೂರೈಸುವ ಭರವಸೆ ನೀಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಕೊರೊನಾ ಸನ್ನಿವೇಶದ ಬಗ್ಗೆ ಮಾತನಾಡಿದ ರಾಜಶೇಖರ್, “ಮೊದಲ ಅಲೆಯ ಸಮಯದಲ್ಲಿ, ಸಾಕಷ್ಟು ಎಚ್ಚರಿಕೆ ಮತ್ತು ಭಯವಿತ್ತು, ಈಗ ಜನರಿಗೆ ಆ ಭಯವಿಲ್ಲ. ನಾವು ಗಮನಿಸಬೇಕಾದ ಅಂಶವೆಂದರೆ, ಎಲ್ಲಿಗೂ ಪ್ರಯಾಣಿಸದ ಮತ್ತು ಯಾವುದೇ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿಲ್ಲದ ಜನರು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೆ ಅಲೆಯಲ್ಲಿ, ಸೋಂಕಿನ ಹರಡುವಿಕೆಯ ಪ್ರಮಾಣವು ಹೆಚ್ಚು ವೇಗವಾಗಿರುತ್ತದೆ, ಆರಂಭಿಕ ದಿನಗಳಲ್ಲಿ, ಇದು ದ್ವಿಗುಣಗೊಳ್ಳಲು 18 ದಿನಗಳನ್ನು ತೆಗೆದುಕೊಳ್ಳುತ್ತಿತ್ತು. ಆದರೆ ಈಗ ದ್ವಿಗುಣಗೊಳ್ಳಲು ಎಂಟು ರಿಂದ ಒಂಬತ್ತು ದಿನಗಳನ್ನು ತೆಗೆದುಕೊಳ್ಳುತ್ತದೆ. ಭವಿಷ್ಯದಲ್ಲಿ ಇದು ದ್ವಿಗುಣಗೊಳ್ಳಲು ಕೇವಲ ಐದು ದಿನಗಳು ಬೇಕಾಗಬಹುದು” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...