Homeಮುಖಪುಟರಿಲಯನ್ಸ್-ಗೂಗಲ್‌ನ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಯೋಜನೆ ತಡವಾಗಿದ್ದು ಏಕೆ?

ರಿಲಯನ್ಸ್-ಗೂಗಲ್‌ನ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಯೋಜನೆ ತಡವಾಗಿದ್ದು ಏಕೆ?

ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ಗಳನ್ನು ಸೆಪ್ಟೆಂಬರ್‌ 10ಕ್ಕೆ ಮಾರುಕಟ್ಟೆಗೆ ತರುವುದಾಗಿ ಹೇಳಿದ್ದ ರಿಲಯನ್ಸ್ ಹಾಗೂ ಗೂಗಲ್ ಸಂಸ್ಥೆಗಳು ತಮ್ಮ ಯೋಜನೆಯನ್ನು ಮುಂದೂಡಿವೆ.

- Advertisement -
- Advertisement -

ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ಗಳನ್ನು ಸೆಪ್ಟೆಂಬರ್‌ 10ಕ್ಕೆ ಮಾರುಕಟ್ಟೆಗೆ ತರುವುದಾಗಿ ಹೇಳಿದ್ದ ರಿಲಯನ್ಸ್ ಹಾಗೂ ಗೂಗಲ್ ಸಂಸ್ಥೆಗಳು ತಮ್ಮ ಯೋಜನೆಯನ್ನು ಮುಂದೂಡಿವೆ.

ಅರೆವಾಹಕಗಳ (ಸೆಮಿಕಂಡಕ್ಟರ್‌ಗಳು) ಕೊರತೆಯಿಂದಾಗಿ ರಿಲಿಯನ್ಸ್‌ ಕಂಪನಿ ಕೈಗೊಂಡಿದ್ದ ಹೊಸ ಯೋಜನೆಗೆ ಹೊಡೆತ ಬಿದ್ದಿದೆ. ರಿಲಿಯನ್ಸ್ ಮತ್ತು ಗೂಗಲ್ ಸಂಸ್ಥೆಗಳು ಮಾರುಕಟ್ಟೆಗೆ ತರಬೇಕೆಂದಿದ್ದ ಕಡಿಮೆ ಬೆಲೆಯ 4ಜಿ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಕೈ ಸೇರುತ್ತಿರುವುದು ವಿಳಂಬವಾಗುತ್ತಿದೆ.

ಜಾಗತಿಕವಾಗಿ ಉಂಟಾಗಿರುವ ಅರೆವಾಹಕಗಳ ಕೊರತೆಯಿಂದಾಗಿ ಎಲ್ಲ ದೊಡ್ಡ ಮಟ್ಟದ ತಾಂತ್ರಿಕ ಉತ್ಪನ್ನಗಳಿಗೆ, ಕಾರಿನಿಂದ ಹಿಡಿದು ಟೆಲಿವಿಷನ್‌ವರೆಗೂ ತೊಂದರೆಯಾಗಿದೆ. ಭಾರತದ ಸ್ಮಾರ್ಟ್‌‌ಫೋನ್‌ ಮಾರುಕಟ್ಟೆಗೆ ತರಬೇಕೆಂದಿದ್ದ ಸ್ಮಾರ್ಟ್‌ಪೋನ್‌ ಉದ್ಯಮಕ್ಕೂ ಸಮಸ್ಯೆಯಾಗಿದೆ ಎಂದು ಸ್ಕ್ರೋಲ್‌ ಡಾಟ್ ಇನ್ ಸುದ್ದಿ ಜಾಲತಾಣ ವರದಿ ಮಾಡಿದೆ.

ರಿಲಿಯನ್ಸ್‌ ಮತ್ತು ಗೂಗಲ್ ಜಂಟಿಯಾಗಿ ಜಿಯೋಪೋನ್‌ ನೆಕ್ಸ್‌ಟ್‌ ಎಂಬ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಕೋಟ್ಯಾಂತರ ಭಾರತೀಯರಿಗೆ ತಲುಪಿಸುವ ಗುರಿ ಹೊಂದಿದ್ದವು. ಸೆಪ್ಟೆಂಬರ್ 10ರಂದು ಈ ಪೋನ್‌ಗಳನ್ನು ಮಾರುಕಟ್ಟೆಗೆ ತರುವುದಾಗಿ ಘೋಷಿಸಲಾಗಿತ್ತು. ಆದರೆ ರಿಲಿಯನ್ಸ್ ಕಂಪನಿಯ ಟೆಲಿಕಾಂ ಘಟಕವು ಕೊನೆ ಕ್ಷಣದಲ್ಲಿ ಹೊಸ ಪೋನ್‌ಗಳ ಅನಾವರಣ ಕಾರ್ಯಕ್ರಮವನ್ನು ಮುಂದೂಡಿದೆ. ದೀಪಾವಳಿ (ನವೆಂಬರ್‌) ಸಮಯದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ.

“ಈ ಹೆಚ್ಚುವರಿ ಸಮಯವು ಜಾಗತಿಕವಾಗಿ ಅರೆವಾಹಕಗಳ ಕೊರತೆಯನ್ನು ತಗ್ಗಿಸುತ್ತದೆ” ಎಂದು ಜಿಯೋ ಹಾಗೂ ಗೂಗಲ್ ಸಂಸ್ಥೆಗಳು ಜಂಟಿಯಾಗಿ ಹೇಳಿಕೆ ನೀಡಿವೆ.

ಇದನ್ನೂ ಓದಿ:ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಭಾರತದ ತಾಂತ್ರಿಕ ವಲಯ ಸೆಮಿಕಂಡಕ್ಟರ್‌ಗಳ ಆಮದಿನ ಮೇಲೆ ಅವಲಂಬಿತವಾಗಿದೆ ಎಂದು ಸ್ಕೋಲ್‌ ವರದಿ ಮಾಡಿದೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಜಿಯೋ, ಗೂಗಲ್‌ ಕೈಗೊಂಡಿದ್ದ ಈ  ವ್ಯವಹಾರಕ್ಕೆ ಪೆಟ್ಟು ಬಿದ್ದಿದೆ ಎಂದು ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...