Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...