Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...