Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...