Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...