Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...