Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...