Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...