Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...