Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...