Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...