Homeಮುಖಪುಟವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

- Advertisement -
- Advertisement -

ಕೊರೊನಾ ಕಾರಣಕ್ಕೆ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ವಿಧಿಸಲಾಗಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾದುದ್ದಾಗಿದೆ. ಆದರೆ ಈ ಸಮಯದಲ್ಲಿ ಅಗತ್ಯ ವಸ್ತಗಳ ಖರೀದಿಗೆ ಬರುವ ಜನಸಾಮಾನ್ಯರ ಮೇಲಿನ ಪೊಲೀಸ್‌ ದಬ್ಬಾಳಿಕೆ, ದೌರ್ಜನ್ಯಗಳು ಎಗ್ಗಿಲ್ಲದೇ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ರೈತನೊಬ್ಬ ಮೃತಪಟ್ಟಿರುವ ಘಟನೆ ವರದಿಯಾದರೆ, ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯ ನೌಕರನ ಮೇಲೆಯೇ ಪೊಲೀಸರು ಯದ್ವಾತದ್ವಾ ಲಾಠಿ ಬೀಸಿ ಟೀಕೆಗೊಳಗಾಗಿದ್ದಾರೆ.

ಇದೇ ರೀತಿಯ ಪೊಲೀಸ್‌ ದೌರ್ಜನ್ಯ ದಾವಣಗೆರೆ ಜಿಲ್ಲೆಯಲ್ಲಿಯೂ ವರದಿಯಾಗಿದೆ. ಕೊರೊನಾ ವಾರಿಯರ್‌ ಪಾಸ್‌ ಸಹ ಹೊಂದಿದ್ದ ಮೊಹಮ್ಮದ್‌ ಅವೇಜ್‌ ಎಂಬ ಸ್ವಯಂ ಸೇವಕನೊಬ್ಬ ಅಕ್ಕಿ ಖರೀದಿಸಲು ಬೀದಿಗೆ ಬಂದ ಸಂದರ್ಭದಲ್ಲಿ ಪೊಲೀಸ್‌ ಪೇದೆಯೊಬ್ಬ ಏಕಾಏಕಿ ಹಲ್ಲೆ ಮಾಡಿದ ಕಾರಣಕ್ಕೆ ಕೈ ಮುರಿದುಹೋಗಿರುವ ದುರ್ಘಟನೆ ನಿನ್ನೆ ಜರುಗಿದೆ.

ನಿನ್ನೆ ಬೆಳಿಗ್ಗೆ 9:30ರ ಸಮಯದಲ್ಲಿ ಅಕ್ಕಿ ಚೀಲ ತರಲು ಬೈಕ್‌ನಲ್ಲಿ ಮೊಹಮ್ಮದ್‌ ಅವೇಜ್‌ ಹೊರಟಿದ್ದಾರೆ. ಅಷ್ಟರಲ್ಲಿ ವಿನೋಬಾನಗರದ ಎರಡನೇ ಮೈನ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಲಾಠಿಯಿಂದ ಅವೇಜ್‌ ಮೇಲೆ ಮನಸೋಇಚ್ಛೆ ಹೊಡೆದಿದ್ದಾರೆ. ನಾನೊಬ್ಬ ಕೊರೊನಾ ವಾರಿಯರ್‌ ವಾಲಂಟಿಯರ್‌. ಅಕ್ಕಿ ತರಲಷ್ಟೇ ಹೊರಟಿದ್ದೀನಿ ಹೊಡೆಯಬೇಡಿ ಎಂದು ಮನವಿ ಮಾಡಿದರೂ ಕೇಳದೆ ಪೇದೆ ಹೊಡೆದಿದ್ದರಿಂದ ಅವೇಜ್‌ನ ಎಡಗೈ ಮೂಳೆಯೇ ಮುರಿದುಹೋಗಿದೆ ಎಂದು ಆಸ್ಪತ್ರೆಯ ಎಕ್ಸ್‌ರೇ ವರದಿಗಳು ಹೇಳುತ್ತಿವೆ.

ಎಡಗೈ ಮೂಳೆ ಮುರಿದ ಎಕ್ಸ್‌ರೇ ಚಿತ್ರ

ದಾವಣಗೆರೆ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7 ರಿಂದ 11 ಗಂಟೆಯೊಳಗೆ ಅಗತ್ಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದೆಂದು ಸೂಚಿಸಿದ್ದರು. ಅದರನುಗುಣವಾಗಿಯೇ ನಾನು 9:30 ರ ಸಮಯದಲ್ಲಿ ಅಕ್ಕಿ ತರಲು ಹೋಗಿದ್ದೆ. ಆದರೆ ಪೊಲೀಸ್‌ ಪೇದೆ ನನ್ನನ್ನು ಕ್ರಿಮಿನಲ್‌ ರೀತಿ ನಡೆಸಿಕೊಂಡರು. ನಾನು ರೆಡ್‌ಕ್ರಾಸ್‌ ಸಂಸ್ಥೆಯಿಂದ ಕೊರೊನಾ ವಾರಿಯರ್‌ ವಾಲಂಟೀಯರ್‌ ಆಗಿ ತರಭೇತಿ ಪಡೆದಿದ್ದೇನೆ, ಪಾಸ್‌ ಇದೆ ಎಂದರೂ ಸಹ ಬಿಡದೇ ಹೊಡೆದರು. ಪೊಲೀಸರೇಕೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ? ನಾವು ಮನುಷ್ಯರಲ್ಲವೇ ಎನ್ನುತ್ತಾರೆ ಪೆಟ್ಟು ತಿಂದ ಮೊಹಮ್ಮದ್‌ ಅವೇಜ್‌.

ವಿಡಿಯೋ ನೋಡಿ:

ಮಿತಿ ಮೀರುತ್ತಿರುವ ಪೊಲೀಸರ ವರ್ತನೆ. ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌..

Posted by Naanu Gauri on Monday, March 30, 2020

ಈ ಕುರಿತು ಎಕ್ಸ್ಟೆನ್ಸನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಆದರೆ ಪೊಲೀಸರು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದರ ಬದಲು ರಾಜೀ ಮಾಡಿಕೊಳ್ಳಿ ಎಂದು ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ. ಇನ್ನೊಂದೆಡೆ ನನ್ನ ಮೇಲೆ ಹಲ್ಲೆ ಮಾಡಿದ ಪೇದೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ನನ್ನ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ. ಇದ್ಯಾವ ನ್ಯಾಯ ಎಂದು ಅವೇಜ್‌ ಅಳಲು ತೋಡಿಕೊಂಡಿದ್ದಾರೆ.

 

ನಮಗೆ ಪೊಲೀಸರ ಮೇಲೆ ನಂಬಿಕೆಯಿಲ್ಲ. ಅವರು ಮನುಷ್ಯರಂತೆ ವರ್ತಿಸುತ್ತಿಲ್ಲ. ಹಾಗಾಗಿ ದಾವಣಗೆರೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡುತ್ತೇವೆ. ಕೂಡಲೇ ಆ ಪೊಲೀಸ್‌ ಪೇದೆಯನ್ನು ಅಮಾನತು ಮಾಡಬೇಕು. ಪೊಲೀಸರು ಜನರೊಂದಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ಅವೇಜ್‌ ಹೇಳಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಸರಿಯಾದ ಕ್ರಮವೇ ಆದರೂ ಅದನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕ ಜನರ ಮೇಲೆ ಲಾಠಿ ಬೀಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಹೀಗೆ ಮುಂದುವರಿದಲ್ಲಿ ಜನರು ಪೊಲೀಸ್‌ ವ್ಯವಸ್ಥೆಯ ಬಗ್ಗೆಯೇ ನಂಬಿಕೆ ಕಳೆದುಕೊಳ್ಳುವ ಅಪಾಯವಿದೆ. ಕೆಲ ಪೊಲೀಸರ ಈ ಅಮಾನವೀಯ ವರ್ತನೆಯಿಂದಾಗಿ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಆಗಬಾರದು. ಹಾಗಾಗಿ ಈಗಲಾದರೂ ಪೊಲೀಸರು ಎಚ್ಚೆತ್ತುಕೊಳ್ಳಲಿದ್ದಾರೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mohamad avez….. ದೈರ್ಯವಾಗಿ ಇರಿ…., ಈ ಪೊಲೀಸ್ ರಿಗೆ ಏನ್ ಆಗಿದೆಯೋ…….. ದೇವರೇ ಕಾಪಾಡಬೇಕು ಇಂತವರಿಂದ……..

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...