Homeಅಂತರಾಷ್ಟ್ರೀಯಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ

ಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ

- Advertisement -
- Advertisement -

ಸೋಮವಾರ ಸಂಜೆ ಪೂರ್ವ ಲಡಾಖ್‌ನಲ್ಲಿ ಚೀನಾದ ಸೈನ್ಯದೊಂದಿಗೆ ಹಿಂಸಾತ್ಮಕ ಮುಖಾಮುಖಿಯಾದ ನಂತರ 20 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಭಾರತೀಯ ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಮುಖಾಮುಖಿಯಲ್ಲಿ 43 ಚೀನೀ ಸೈನಿಕರು ಕೊಲ್ಲಲ್ಪಟ್ಟಿರಬಹುದು ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮಂಗಳವಾರ ಬೆಳಿಗ್ಗೆ ಸೇನೆಯ ಹೇಳಿಕೆಯು ಕರ್ನಲ್ ಮತ್ತು ಇಬ್ಬರು ಜವಾನರ ಸಾವನ್ನು ದೃಢಪಡಿಸಿತು ಮತ್ತು “ಎರಡೂ ಕಡೆಗಳಲ್ಲಿ ಸಾವುನೋವು” ಸಂಭವಿಸಿದೆ ಎಂದು ಹೇಳಿತ್ತು. ನಂತರ ಸಂಜೆ ಮತ್ತೊಂದು ಹೇಳಿಕೆಯಲ್ಲಿ, ಸೈನ್ಯವು ಹೆಚ್ಚು ಗಂಭೀರವಾಗಿ ಗಾಯಗೊಂಡ 17 ಮಂದಿ ಬಲಿಯಾದರು” ಎಂದು ಸೇರಿಸಲಾಗಿದೆ.

ಈ ಘಟನೆಯಲ್ಲಿ ಯಾವುದೇ ಶೂಟಿಂಗ್ ನಡೆದಿಲ್ಲ ಆದರೆ “ಹಿಂಸಾತ್ಮಕ ಕೈ ಕೈ ಹೊಡೆದಾಟಗಳು” ನಡೆದಿವೆ ಎಂದು ಭಾರತೀಯ ಸೇನೆಯ ಮೂಲವನ್ನು ಉಲ್ಲೇಖಿಸಿ ಎಜೆನ್ಸ್ ಫ್ರಾನ್ಸ್ ಪ್ರೆಸ್ ಹೇಳಿದೆ. ಸೈನಿಕರು ಒಬ್ಬರಿಗೊಬ್ಬರು ಗುದ್ದುವುದು ಮತ್ತು ಕಲ್ಲುಗಳನ್ನು ಎಸೆದರು. ಸೋಮವಾರ ಮಧ್ಯರಾತ್ರಿಯವರೆಗೆ ಗಂಟೆಗಳ ಕಾಲ ನಡೆದ ಹೋರಾಟದ ಸಮಯದಲ್ಲಿ ಚೀನಾದ ಸೈನ್ಯವು ರಾಡ್ ಮತ್ತು ಉಗುರು ತುಂಬಿದ ಕೋಲು‌ಗಳನ್ನು ಬಳಸಿದೆ ಎಂದು ವರದಿಗಳು ತಿಳಿಸಿವೆ.

ಈ ಘಟನೆಯಿಂದಾಗಿ ಸಾವುನೋವು ಸಂಭವಿಸಿದೆ ಎಂದು ಚೀನಾದ ರಕ್ಷಣಾ ಸಚಿವಾಲಯ ದೃಢಪಡಿಸಿದೆ ಆದರೆ ವಿವರಗಳನ್ನು ನೀಡಿಲ್ಲ.

“ಭಾರತವು ತನ್ನ ಎಲ್ಲಾ ಚಟುವಟಿಕೆಗಳು ಯಾವಾಗಲೂ ವಾಸ್ತವಿಕ ನಿಯಂತ್ರಣ ರೇಖೆಯ ಭಾರತದ ಭಾಗದಲ್ಲಿದೆ ಎಂಬುದು ಬಹಳ ಸ್ಪಷ್ಟವಾಗಿದೆ. ಚೀನಾದ ಕಡೆಯಿಂದಲೇ ಹಿಂಸಾಚಾರ ನಡೆದಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಉಭಯ ದೇಶಗಳು ಚರ್ಚೆಗಳ ನಂತರ ತಲುಪಿದ ಒಮ್ಮತದ ಗಂಭೀರ ಉಲ್ಲಂಘನೆಯಾಗಿದೆ. ಭಾರತೀಯ ಸೈನಿಕರು “ಎರಡು ಬಾರಿ ಗಡಿರೇಖೆಯನ್ನು ದಾಟಿ ಚೀನಾದ ಪಡೆಗಳನ್ನು ಪ್ರಚೋದಿಸಿದರು ಮತ್ತು ಆಕ್ರಮಣ ಮಾಡಿದರು, ಇದು ಎರಡು ಗಡಿ ಪಡೆಗಳ ನಡುವೆ ಹಿಂಸಾತ್ಮಕ ದೈಹಿಕ ಮುಖಾಮುಖಿಯನ್ನು ಉಂಟುಮಾಡಿತು” ಎಂದು ಜಾಹೋ ಲಿಜಿಯಾನ್ ಬೀಜಿಂಗ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಂಪರ್ಕ ಸುಧಾರಿಸಲು ಮತ್ತು ಚೀನಾದ ಮೂಲಸೌಕರ್ಯಗಳೊಂದಿಗಿನ ಅಂತರವನ್ನು ಕಡಿಮೆ ಮಾಡಲು ಭಾರತವು ರಸ್ತೆಗಳು ಮತ್ತು ವಾಯುನೆಲೆಗಳನ್ನು ನಿರ್ಮಿಸುತ್ತಿರುವುದು ಮುಖಾಮುಖಿಯಾಗಲು ಒಂದು ಕಾರಣ ಎಂದು ಮಿಲಿಟರಿ ತಜ್ಞರು ಹೇಳುತ್ತಾರೆ. ಗಾಲ್ವಾನ್‌ನಲ್ಲಿ ಭಾರತವು ಕಳೆದ ಅಕ್ಟೋಬರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯನ್ನು ಪೂರ್ಣಗೊಳಿಸಿತು. ಚೀನಾದ ಆಕ್ಷೇಪಣೆ ಎತ್ತಿದಾಗ ಭಾರತವು ವಾಸ್ತವ ನಿಯಂತ್ರಣ ರೇಖೆಯ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿತ್ತು.

ಭಾರತ ಮತ್ತು ಚೀನಾ 1962 ರಲ್ಲಿ ರಕ್ತಸಿಕ್ತ ಗಡಿ ಯುದ್ಧವನ್ನು ನಡೆಸಿದವು. ಅದರ ನಂತರ ಮಾತಿನ ಚಕಮಕಿ ನಡೆದಿದ್ದವು. ಆದರೆ 1975 ರಿಂದ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.


ಇದನ್ನೂ ಓದಿ: ಕರ್ನಲ್ ಸಂತೋಷ್ ಬಾಬು ಪೋಷಕರ ಹೇಳಿಕೆ: ನಮ್ಮ ಮಗ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಕ್ಕೆ ಹೆಮ್ಮೆಯಿದೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...